ಸುಳ್ಯ: ಜಯನಗರ ವಿಕ್ರಮ ಯುವಕ ಮಂಡಲ ಹಾಗೂ ನಗರ ಪಂಚಾಯತ್ ಸುಳ್ಯ ಇದರ ಆಶ್ರಯದಲ್ಲಿ ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮ ದಾನ ಕಾರ್ಯಕ್ರಮ ಭಾನುವಾರ ನಡೆಯಿತು.
ಪರಿಸರದಲ್ಲಿ ಕಾಡುಗಿಡಗಳು ಬೃಹತ್ ಪ್ರಮಾಣದಲ್ಲಿ ಬೆಳೆದು ,ಗಿಡ ಬಳ್ಳಿಗಳಿಂದ ರುದ್ರ ಭೂಮಿಗೆ ಸಾಗುವ ದಾರಿಯಲ್ಲಿ ಆವರಿಸಿಕೊಂಡಿದೆ.ಸುಳ್ಯ ನ.ಪಂ ವತಿಯಿಂದ ದೀಪಗಳು ,ದಾರಿ ದೀಪಗಳು ಅಳವಡಿಸಲಾಗಿದ್ದರೂ ಇದೀಗ ಅದು ಯಾವುದು ಈಗ ಕೆಲಸಕ್ಕೆ ಬಾರದೆ ಪರಿಸರ ಕತ್ತಲುಮಯವಾಗಿದೆ.ಸ್ಥಳೀಯರ ಪ್ರಕಾರ ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಒಂದು ಮೃತ ದೇಹವನ್ನು ಶವಸಂಸ್ಕಾರಕ್ಕೆ ತಂದಿದ್ದು ಸ್ಥಳದಲ್ಲಿ ದೀಪದ ಬೆಳಕಿನ ಸೌಲಭ್ಯಗಳು ಇಲ್ಲದ ಕಾರಣದಿಂದಾಗಿ ಮೃತ ಶರೀರವನ್ನು ಬೇರೆ ಕಡೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಸ್ಥಳೀಯ ಸಂಘಸಂಸ್ಥೆಗಳು ಶ್ರಮದಾನದ ಮೂಲಕ ಪರಿಹಾರಕ್ಕೆ ಮುಂದಾದರು. ಸಂಬಂಧಿಸಿದ ಇಲಾಖೆಗಳು ಸ್ಪಂದಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಂದೆ ಬರಬೇಕಾಗಿದೆ. ಕಳೆದ ಕೆಲವು ವರ್ಷಗಳಿಂದ ವಿಕ್ರಮ ಯುವಕ ಮಂಡಲ .ರಿ.ಜಯನಗರ ಸಂಘದಿಂದ ಈ ಪರಿಸರದಲ್ಲಿ ಶ್ರಮದಾನ ನಡೆಸಿ ಸಹಕಾರ ನೀಡಲಾಗುತ್ತಿದೆ.
ಶ್ರಮದಾನ ಮಾತ್ರ ಸಾಲದು ,ಮೂಲಭೂತ ಸೌಲಭ್ಯಗಳಾದ ದಾರಿ ದೀಪ,ಹೈಮಾಕ್ಸ್ ದೀಪಗಳ ದುರಸ್ತಿ ಕಾರ್ಯ ಕೂಡಲೆ ನಡೆಯಬೇಕಾಗಿದೆ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.
ಶ್ರಮದಾನದ ಸಂದರ್ಭ ನ.ಪಂ ಸ್ಥಳೀಯ ಸದಸ್ಯೆ ಶಿಲ್ಪಾ ಸುದೇವ,ವಿಕ್ರಮ ಯುವಕ ಮಂಡಲ ಅದ್ಯಕ್ಷ ಪ್ರಸನ್ನ ಎಂ ಆರ್,ಮಾಜಿ ಅದ್ಯಕ್ಷರುಗಳಾದ ಪ್ರವೀಣ್ ಕುಮಾರ್,ಸುರೇಂದ್ರ ಕಾಮತ್,ಸುಧೇವ ಜಯನಗರ,ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಭಾಗವಹಿಸಿದರು.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…