Advertisement
ಸುದ್ದಿಗಳು

ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮದಾನ

Share

ಸುಳ್ಯ: ಜಯನಗರ ವಿಕ್ರಮ ಯುವಕ ಮಂಡಲ ಹಾಗೂ ನಗರ ಪಂಚಾಯತ್ ಸುಳ್ಯ ಇದರ ಆಶ್ರಯದಲ್ಲಿ ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮ ದಾನ ಕಾರ್ಯಕ್ರಮ ಭಾನುವಾರ ನಡೆಯಿತು.

ಪರಿಸರದಲ್ಲಿ ಕಾಡುಗಿಡಗಳು ಬೃಹತ್ ಪ್ರಮಾಣದಲ್ಲಿ ಬೆಳೆದು ,ಗಿಡ ಬಳ್ಳಿಗಳಿಂದ ರುದ್ರ ಭೂಮಿಗೆ ಸಾಗುವ ದಾರಿಯಲ್ಲಿ ಆವರಿಸಿಕೊಂಡಿದೆ.ಸುಳ್ಯ ನ.ಪಂ ವತಿಯಿಂದ ದೀಪಗಳು ,ದಾರಿ ದೀಪಗಳು ಅಳವಡಿಸಲಾಗಿದ್ದರೂ ಇದೀಗ ಅದು ಯಾವುದು ಈಗ ಕೆಲಸಕ್ಕೆ ಬಾರದೆ ಪರಿಸರ ಕತ್ತಲುಮಯವಾಗಿದೆ.ಸ್ಥಳೀಯರ ಪ್ರಕಾರ ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಒಂದು ಮೃತ ದೇಹವನ್ನು ಶವಸಂಸ್ಕಾರಕ್ಕೆ ತಂದಿದ್ದು ಸ್ಥಳದಲ್ಲಿ ದೀಪದ ಬೆಳಕಿನ ಸೌಲಭ್ಯಗಳು ಇಲ್ಲದ ಕಾರಣದಿಂದಾಗಿ ಮೃತ ಶರೀರವನ್ನು ಬೇರೆ ಕಡೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಸ್ಥಳೀಯ ಸಂಘಸಂಸ್ಥೆಗಳು ಶ್ರಮದಾನದ ಮೂಲಕ ಪರಿಹಾರಕ್ಕೆ ಮುಂದಾದರು. ಸಂಬಂಧಿಸಿದ ಇಲಾಖೆಗಳು ಸ್ಪಂದಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಂದೆ ಬರಬೇಕಾಗಿದೆ. ಕಳೆದ ಕೆಲವು ವರ್ಷಗಳಿಂದ ವಿಕ್ರಮ ಯುವಕ ಮಂಡಲ .ರಿ.ಜಯನಗರ ಸಂಘದಿಂದ ಈ ಪರಿಸರದಲ್ಲಿ ಶ್ರಮದಾನ ನಡೆಸಿ ಸಹಕಾರ ನೀಡಲಾಗುತ್ತಿದೆ.
ಶ್ರಮದಾನ ಮಾತ್ರ ಸಾಲದು ,ಮೂಲಭೂತ ಸೌಲಭ್ಯಗಳಾದ ದಾರಿ ದೀಪ,ಹೈಮಾಕ್ಸ್ ದೀಪಗಳ ದುರಸ್ತಿ ಕಾರ್ಯ ಕೂಡಲೆ ನಡೆಯಬೇಕಾಗಿದೆ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.

ಶ್ರಮದಾನದ ಸಂದರ್ಭ  ನ.ಪಂ ಸ್ಥಳೀಯ ಸದಸ್ಯೆ ಶಿಲ್ಪಾ ಸುದೇವ,ವಿಕ್ರಮ ಯುವಕ ಮಂಡಲ ಅದ್ಯಕ್ಷ ಪ್ರಸನ್ನ ಎಂ ಆರ್,ಮಾಜಿ ಅದ್ಯಕ್ಷರುಗಳಾದ ಪ್ರವೀಣ್ ಕುಮಾರ್,ಸುರೇಂದ್ರ ಕಾಮತ್,ಸುಧೇವ ಜಯನಗರ,ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು  ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

7 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

8 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

17 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

21 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago