Advertisement
ಸುದ್ದಿಗಳು

ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮದಾನ

Share

ಸುಳ್ಯ: ಜಯನಗರ ವಿಕ್ರಮ ಯುವಕ ಮಂಡಲ ಹಾಗೂ ನಗರ ಪಂಚಾಯತ್ ಸುಳ್ಯ ಇದರ ಆಶ್ರಯದಲ್ಲಿ ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮ ದಾನ ಕಾರ್ಯಕ್ರಮ ಭಾನುವಾರ ನಡೆಯಿತು.

ಪರಿಸರದಲ್ಲಿ ಕಾಡುಗಿಡಗಳು ಬೃಹತ್ ಪ್ರಮಾಣದಲ್ಲಿ ಬೆಳೆದು ,ಗಿಡ ಬಳ್ಳಿಗಳಿಂದ ರುದ್ರ ಭೂಮಿಗೆ ಸಾಗುವ ದಾರಿಯಲ್ಲಿ ಆವರಿಸಿಕೊಂಡಿದೆ.ಸುಳ್ಯ ನ.ಪಂ ವತಿಯಿಂದ ದೀಪಗಳು ,ದಾರಿ ದೀಪಗಳು ಅಳವಡಿಸಲಾಗಿದ್ದರೂ ಇದೀಗ ಅದು ಯಾವುದು ಈಗ ಕೆಲಸಕ್ಕೆ ಬಾರದೆ ಪರಿಸರ ಕತ್ತಲುಮಯವಾಗಿದೆ.ಸ್ಥಳೀಯರ ಪ್ರಕಾರ ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಒಂದು ಮೃತ ದೇಹವನ್ನು ಶವಸಂಸ್ಕಾರಕ್ಕೆ ತಂದಿದ್ದು ಸ್ಥಳದಲ್ಲಿ ದೀಪದ ಬೆಳಕಿನ ಸೌಲಭ್ಯಗಳು ಇಲ್ಲದ ಕಾರಣದಿಂದಾಗಿ ಮೃತ ಶರೀರವನ್ನು ಬೇರೆ ಕಡೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಸ್ಥಳೀಯ ಸಂಘಸಂಸ್ಥೆಗಳು ಶ್ರಮದಾನದ ಮೂಲಕ ಪರಿಹಾರಕ್ಕೆ ಮುಂದಾದರು. ಸಂಬಂಧಿಸಿದ ಇಲಾಖೆಗಳು ಸ್ಪಂದಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಂದೆ ಬರಬೇಕಾಗಿದೆ. ಕಳೆದ ಕೆಲವು ವರ್ಷಗಳಿಂದ ವಿಕ್ರಮ ಯುವಕ ಮಂಡಲ .ರಿ.ಜಯನಗರ ಸಂಘದಿಂದ ಈ ಪರಿಸರದಲ್ಲಿ ಶ್ರಮದಾನ ನಡೆಸಿ ಸಹಕಾರ ನೀಡಲಾಗುತ್ತಿದೆ.
ಶ್ರಮದಾನ ಮಾತ್ರ ಸಾಲದು ,ಮೂಲಭೂತ ಸೌಲಭ್ಯಗಳಾದ ದಾರಿ ದೀಪ,ಹೈಮಾಕ್ಸ್ ದೀಪಗಳ ದುರಸ್ತಿ ಕಾರ್ಯ ಕೂಡಲೆ ನಡೆಯಬೇಕಾಗಿದೆ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.

ಶ್ರಮದಾನದ ಸಂದರ್ಭ  ನ.ಪಂ ಸ್ಥಳೀಯ ಸದಸ್ಯೆ ಶಿಲ್ಪಾ ಸುದೇವ,ವಿಕ್ರಮ ಯುವಕ ಮಂಡಲ ಅದ್ಯಕ್ಷ ಪ್ರಸನ್ನ ಎಂ ಆರ್,ಮಾಜಿ ಅದ್ಯಕ್ಷರುಗಳಾದ ಪ್ರವೀಣ್ ಕುಮಾರ್,ಸುರೇಂದ್ರ ಕಾಮತ್,ಸುಧೇವ ಜಯನಗರ,ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು  ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

7 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

8 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

13 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

15 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

15 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

17 hours ago