Advertisement
ಸುದ್ದಿಗಳು

ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮದಾನ

Share

ಸುಳ್ಯ: ಜಯನಗರ ವಿಕ್ರಮ ಯುವಕ ಮಂಡಲ ಹಾಗೂ ನಗರ ಪಂಚಾಯತ್ ಸುಳ್ಯ ಇದರ ಆಶ್ರಯದಲ್ಲಿ ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮ ದಾನ ಕಾರ್ಯಕ್ರಮ ಭಾನುವಾರ ನಡೆಯಿತು.

ಪರಿಸರದಲ್ಲಿ ಕಾಡುಗಿಡಗಳು ಬೃಹತ್ ಪ್ರಮಾಣದಲ್ಲಿ ಬೆಳೆದು ,ಗಿಡ ಬಳ್ಳಿಗಳಿಂದ ರುದ್ರ ಭೂಮಿಗೆ ಸಾಗುವ ದಾರಿಯಲ್ಲಿ ಆವರಿಸಿಕೊಂಡಿದೆ.ಸುಳ್ಯ ನ.ಪಂ ವತಿಯಿಂದ ದೀಪಗಳು ,ದಾರಿ ದೀಪಗಳು ಅಳವಡಿಸಲಾಗಿದ್ದರೂ ಇದೀಗ ಅದು ಯಾವುದು ಈಗ ಕೆಲಸಕ್ಕೆ ಬಾರದೆ ಪರಿಸರ ಕತ್ತಲುಮಯವಾಗಿದೆ.ಸ್ಥಳೀಯರ ಪ್ರಕಾರ ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಒಂದು ಮೃತ ದೇಹವನ್ನು ಶವಸಂಸ್ಕಾರಕ್ಕೆ ತಂದಿದ್ದು ಸ್ಥಳದಲ್ಲಿ ದೀಪದ ಬೆಳಕಿನ ಸೌಲಭ್ಯಗಳು ಇಲ್ಲದ ಕಾರಣದಿಂದಾಗಿ ಮೃತ ಶರೀರವನ್ನು ಬೇರೆ ಕಡೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಸ್ಥಳೀಯ ಸಂಘಸಂಸ್ಥೆಗಳು ಶ್ರಮದಾನದ ಮೂಲಕ ಪರಿಹಾರಕ್ಕೆ ಮುಂದಾದರು. ಸಂಬಂಧಿಸಿದ ಇಲಾಖೆಗಳು ಸ್ಪಂದಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಂದೆ ಬರಬೇಕಾಗಿದೆ. ಕಳೆದ ಕೆಲವು ವರ್ಷಗಳಿಂದ ವಿಕ್ರಮ ಯುವಕ ಮಂಡಲ .ರಿ.ಜಯನಗರ ಸಂಘದಿಂದ ಈ ಪರಿಸರದಲ್ಲಿ ಶ್ರಮದಾನ ನಡೆಸಿ ಸಹಕಾರ ನೀಡಲಾಗುತ್ತಿದೆ.
ಶ್ರಮದಾನ ಮಾತ್ರ ಸಾಲದು ,ಮೂಲಭೂತ ಸೌಲಭ್ಯಗಳಾದ ದಾರಿ ದೀಪ,ಹೈಮಾಕ್ಸ್ ದೀಪಗಳ ದುರಸ್ತಿ ಕಾರ್ಯ ಕೂಡಲೆ ನಡೆಯಬೇಕಾಗಿದೆ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.

ಶ್ರಮದಾನದ ಸಂದರ್ಭ  ನ.ಪಂ ಸ್ಥಳೀಯ ಸದಸ್ಯೆ ಶಿಲ್ಪಾ ಸುದೇವ,ವಿಕ್ರಮ ಯುವಕ ಮಂಡಲ ಅದ್ಯಕ್ಷ ಪ್ರಸನ್ನ ಎಂ ಆರ್,ಮಾಜಿ ಅದ್ಯಕ್ಷರುಗಳಾದ ಪ್ರವೀಣ್ ಕುಮಾರ್,ಸುರೇಂದ್ರ ಕಾಮತ್,ಸುಧೇವ ಜಯನಗರ,ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು  ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

6 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

7 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

22 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago