Advertisement
ಸುದ್ದಿಗಳು

ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮದಾನ

Share

ಸುಳ್ಯ: ಜಯನಗರ ವಿಕ್ರಮ ಯುವಕ ಮಂಡಲ ಹಾಗೂ ನಗರ ಪಂಚಾಯತ್ ಸುಳ್ಯ ಇದರ ಆಶ್ರಯದಲ್ಲಿ ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮ ದಾನ ಕಾರ್ಯಕ್ರಮ ಭಾನುವಾರ ನಡೆಯಿತು.

ಪರಿಸರದಲ್ಲಿ ಕಾಡುಗಿಡಗಳು ಬೃಹತ್ ಪ್ರಮಾಣದಲ್ಲಿ ಬೆಳೆದು ,ಗಿಡ ಬಳ್ಳಿಗಳಿಂದ ರುದ್ರ ಭೂಮಿಗೆ ಸಾಗುವ ದಾರಿಯಲ್ಲಿ ಆವರಿಸಿಕೊಂಡಿದೆ.ಸುಳ್ಯ ನ.ಪಂ ವತಿಯಿಂದ ದೀಪಗಳು ,ದಾರಿ ದೀಪಗಳು ಅಳವಡಿಸಲಾಗಿದ್ದರೂ ಇದೀಗ ಅದು ಯಾವುದು ಈಗ ಕೆಲಸಕ್ಕೆ ಬಾರದೆ ಪರಿಸರ ಕತ್ತಲುಮಯವಾಗಿದೆ.ಸ್ಥಳೀಯರ ಪ್ರಕಾರ ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಒಂದು ಮೃತ ದೇಹವನ್ನು ಶವಸಂಸ್ಕಾರಕ್ಕೆ ತಂದಿದ್ದು ಸ್ಥಳದಲ್ಲಿ ದೀಪದ ಬೆಳಕಿನ ಸೌಲಭ್ಯಗಳು ಇಲ್ಲದ ಕಾರಣದಿಂದಾಗಿ ಮೃತ ಶರೀರವನ್ನು ಬೇರೆ ಕಡೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಸ್ಥಳೀಯ ಸಂಘಸಂಸ್ಥೆಗಳು ಶ್ರಮದಾನದ ಮೂಲಕ ಪರಿಹಾರಕ್ಕೆ ಮುಂದಾದರು. ಸಂಬಂಧಿಸಿದ ಇಲಾಖೆಗಳು ಸ್ಪಂದಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಂದೆ ಬರಬೇಕಾಗಿದೆ. ಕಳೆದ ಕೆಲವು ವರ್ಷಗಳಿಂದ ವಿಕ್ರಮ ಯುವಕ ಮಂಡಲ .ರಿ.ಜಯನಗರ ಸಂಘದಿಂದ ಈ ಪರಿಸರದಲ್ಲಿ ಶ್ರಮದಾನ ನಡೆಸಿ ಸಹಕಾರ ನೀಡಲಾಗುತ್ತಿದೆ.
ಶ್ರಮದಾನ ಮಾತ್ರ ಸಾಲದು ,ಮೂಲಭೂತ ಸೌಲಭ್ಯಗಳಾದ ದಾರಿ ದೀಪ,ಹೈಮಾಕ್ಸ್ ದೀಪಗಳ ದುರಸ್ತಿ ಕಾರ್ಯ ಕೂಡಲೆ ನಡೆಯಬೇಕಾಗಿದೆ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.

ಶ್ರಮದಾನದ ಸಂದರ್ಭ  ನ.ಪಂ ಸ್ಥಳೀಯ ಸದಸ್ಯೆ ಶಿಲ್ಪಾ ಸುದೇವ,ವಿಕ್ರಮ ಯುವಕ ಮಂಡಲ ಅದ್ಯಕ್ಷ ಪ್ರಸನ್ನ ಎಂ ಆರ್,ಮಾಜಿ ಅದ್ಯಕ್ಷರುಗಳಾದ ಪ್ರವೀಣ್ ಕುಮಾರ್,ಸುರೇಂದ್ರ ಕಾಮತ್,ಸುಧೇವ ಜಯನಗರ,ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು  ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

21 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago