Advertisement
ನಮ್ಮೂರ ಸುದ್ದಿ

ಜಯರಾಂ ದೇರಪ್ಪಜ್ಜನಮನೆ ಅವರಿಗೆ ಲಯನ್ ಮಲ್ಟಿಪಲ್ ಪ್ರಶಸ್ತಿ

Share

ಸುಳ್ಯ: ಅಂತರರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಆಂದ್ರಪ್ರದೇಶ, ಗೋವಾ ಮತ್ತು ಕರ್ನಾಟಕ ರಾಜ್ಯಗಳನ್ನೊಳಗೊಂಡ ಮಲ್ಟಿಪಲ್ ಜಿಲ್ಲೆ 317 ಇದರ 2017-18ನೇ ಸಾಲಿನ “ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ” ಪ್ರಶಸ್ತಿಯನ್ನು ಜಯರಾಂ ದೇರಪ್ಪಜ್ಜನಮನೆ ಅವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲ್ಲಿ ಜರಗಿದ 10ನೇ ಮಲ್ಟಿಪಲ್ ಸಮ್ಮೇಳನದಲ್ಲಿ ನೀಡಿ ಗೌರವಿಸಲಾಯಿತು. ನಿಕಟಪೂರ್ವ ಮಲ್ಟಿಪಲ್ ಕೌನ್ಸಿಲ್ ಚೆಯರ್‍ಮೇನ್ ಭಾರತಿ ನಾಗೇಶ್‍ ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು.

ಈ ಗೌರವವನ್ನು 2018-19 ನೇ ಸಾಲಿನಲ್ಲಿ ಲಯನ್ ಜಿಲ್ಲೆ 317-ಡಿ ಯ ಪ್ರಾಂತ್ಯ 4 ನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಲ್ಲದೆ ತನ್ನ ವ್ಯಾಪ್ತಿಯ ಎಲ್ಲಾ ಕ್ಲಬ್‍ಗಳಲ್ಲೂ ನಿರಂತರವಾಗಿ ಸಂಪರ್ಕವನ್ನು ಕಾಯ್ದುಕೊಂಡು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪ್ರೋತ್ಸಾಹಿಸಿದ್ದು ಹಾಗೂ ವಿವಿಧ ಸೇವಾ ಕಾರ್ಯಗಳನ್ನು ಆಧರಿಸಿ ಗೌರವ ನೀಡಲಾಗಿದೆ.

ಈ ಹಿಂದೆಯೂ 2015-16 ರಲ್ಲಿ ಬೆಂಗಳೂರು ಹಾಗೂ 2016-17ರಲ್ಲಿ ಗೋವಾದಲ್ಲಿ ನಡೆದ ಲಯನ್ ಮಲ್ಟಿಪಲ್ ಸಮಾವೇಶಗಳಲ್ಲಿ ಕೂಡಾ ದೇರಪ್ಪಜ್ಜನಮನೆಯವರು ಮಲ್ಟಿಪಲ್ ಪ್ರಶಸ್ತಿಗೆ ಭಾಜನರಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

6 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

15 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

15 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

16 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago