ಜಲಪ್ರಳಯದಲ್ಲಿ ಪರಿಹಾರವೆಂಬುದು ಮರೀಚಿಕೆಯಾಯ್ತು…!

May 12, 2019
4:00 PM

ಸಂಪಾಜೆ: ಕಳೆದ ವರ್ಷದ ಭೀಕರ ಮಳೆ ಹಾಗೂ ಜಲಪ್ರಳಯದಲ್ಲಿ ಸಂಪಾಜೆ ಭಾಗದ ಮೊಣ್ಣಂಗೇರಿ ಪ್ರದೇಶ ನುಚ್ಚುನೂರಾಯಿತು. ಅಲ್ಲಿದ್ದ ಜನರ ಕೃಷಿ ಸಹಿತ ಬದುಕು ಸರ್ವನಾಶವಾಯಿತು. ಸರಕಾರಗಳು ಪರಿಹಾರದ ಭರವಸೆ ನೀಡಿದವು. ಆದರೆ ಇದುವರೆಗೂ ಈ ಪರಿಹಾರ ಸಿಕ್ಕಿಲ್ಲ. ಈಗ ಮತ್ತೆ ಮಳೆಗಾಲ ಶುರುವಾಗಿದೆ.

ಪ್ರಳಯಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದರೂ ತಮಗೆ ಏನೂ ಪರಿಹಾರ ಸಿಕ್ಕಿಲ್ಲ ಎನ್ನುತ್ತಾರೆ ಜೋಡುಪಾಲ ಹಾಗೂ ಮೊಣ್ಣಂಗೇರಿಯ ಸಂತ್ರಸ್ತರು. ಬಹುತೇಕ ಮಂದಿಗೆ ನಿರಾಶ್ರಿತರ ಕೇಂದ್ರದಲ್ಲಿರುವ ಸಂದರ್ಭದಲ್ಲಿ ಸಿಕ್ಕಿದ 3800 ರೂ ರೂ ಮಾತ್ರ ಸಿಕ್ಕಿದೆ ಎನ್ನುತ್ತಾರೆ ಜೋಡುಪಾಲದ ಭಾಷಾ. ಮನೆ ನಾಶವಾದವರಿಗೆ ಮನೆ ನಿರ್ಮಿಸುವುದಾಗಿ ಘೋಷಿಸಿ ಕೊಡಗಿನಲ್ಲಿ ಮನೆ ನಿರ್ಮಾಣ ಆರಂಭಿಸಲಾಗಿದ್ದರೂ ಅದು ಪೂರ್ತಿಯಾಗಿಲ್ಲ. ಎಲ್ಲರಿಗೂ ಮನೆ ಯಾವಾಗ ಸಿಗುತ್ತದೆ ಎಂದು ಕಾದು ಜನರ ನಿರೀಕ್ಷೆ ಹುಸಿಯಾಗುತಿದೆ. ನಿರಾಶ್ರಿತರು ಬಾಡಿಗೆ ಮನೆಗೆ 10 ಸಾವಿರ ರೂ ನೀಡುವುದಾಗಿ ಸರಕಾರ ಹೇಳಿತ್ತು. ಕೆಲವರಿಗೆ ಒಂದೆರಡು ತಿಂಗಳಿದ್ದು ಮಾತ್ರ ಸಿಕ್ಕಿದ್ದು ಬಿಟ್ಟರೆ ಬಹುತೇಕರಿಗೆ ಸಿಕ್ಕಿಲ್ಲ ಎನ್ನುತ್ತಾರೆ.

Advertisement

ಮನೆ ಕಳೆದುಕೊಂಡ ಬಳಿಕ ಒಂದು ತಿಂಗಳ 5000 ರೂಪಾಯಿ ಅಂತ ಮನೆ ಬಾಡಿಗೆ ಬಂದಿದೆ, ನಂತರ ಅದೂ ಬಂದಿಲ್ಲ ಎನ್ನುತ್ತಾರೆ ಜೋಡುಪಾಲದ ಲಕ್ಷ್ಮಣ.

ಇಡೀ ಕೃಷಿ ನಾಶವಾದ ಬಳಿಕ ಕೆಲಸವೂ ಇಲ್ಲವಾಗಿದೆ. ಕೂಲಿ ಕೆಲಸ ಮಾಡಿ ಬದುಕು ಸಾಗಿಸಲೂ ಕಷ್ಟವಾಗಿದೆ. ತೋಟದ ಕೆಲಸ ಮಾಡುವ ಎಂದರೆ ತೋಟವೂ ಇಲ್ಲವಾಗಿದೆ .  ಜಲಪ್ರಳಯದ ಬಳಿಕ ಹೊಳೆ ಮೇಲೆ ಬಂದಿದೆ, ಮನೆ ಕೆಳಗೆ ಆಗಿದೆ. ಹೀಗಾಗಿ ಉಳಿದ ಕೃಷಿಗೆ ಈಗ ನೀರೂ ಇಲ್ಲ ಎಂದು ಅಳಲು ತೋಡುತ್ತಾರೆ ಜೋಡುಪಾಲದ ಭಾಷಾ.

Advertisement

ಹಿಂದೆ 1 ಲಕ್ಷ ಆದಾಯ ಇತ್ತು ಕೃಷಿಯಲ್ಲಿ ಈಗ 8 ಸಾವಿರವೂ ಇಲ್ಲ. ಈ ಹಣದಲ್ಲಿ ಬಾಡಿಗೆ ಮನೆ ಮಾಡುವುದು  ಹೇಗೆ . ಕೃಷಿ ಮಾಡಲಾಗುತ್ತಿಲ್ಲ, ಕೂಲಿ ಕೆಲಸ ಇಲ್ಲ, ಭಿಕ್ಷೆ ಬೇಡಲೂ ಆಗುತ್ತಿಲ್ಲ ಎಂದು ಪ್ರಶ್ನೆ ಹೇಳುತ್ತಾರೆ  ಜೋಡುಪಾಲದ ಸುಂದರ ಪೂಜಾರಿ.

 

Advertisement

ಮನೆ ನಾಶ, ಕೃಷಿ ನಾಶವಾದ ಕೆಲವರು ಸಂಪಾಜೆ ಘಾಟಿ ರಸ್ತೆಯ ಪಕ್ಕದಲ್ಲಿ ಟೀ ಸ್ಟಾಲ್, ಸಣ್ಣ ಅಂಗಡಿ, ಜ್ಯೂಸ್ ಅಂಗಡಿ ಇತ್ಯಾದಿ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಸರಕಾರದ ಪರಿಹಾರ, ಮನೆ ನಂಬಿ ಕೂತರೆ ಆಗದು ಎನ್ನುತ್ತಾರೆ.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror