Advertisement
The Rural Mirror ಫಾಲೋಅಪ್

ಜಲಪ್ರಳಯದಲ್ಲಿ ಪರಿಹಾರವೆಂಬುದು ಮರೀಚಿಕೆಯಾಯ್ತು…!

Share

ಸಂಪಾಜೆ: ಕಳೆದ ವರ್ಷದ ಭೀಕರ ಮಳೆ ಹಾಗೂ ಜಲಪ್ರಳಯದಲ್ಲಿ ಸಂಪಾಜೆ ಭಾಗದ ಮೊಣ್ಣಂಗೇರಿ ಪ್ರದೇಶ ನುಚ್ಚುನೂರಾಯಿತು. ಅಲ್ಲಿದ್ದ ಜನರ ಕೃಷಿ ಸಹಿತ ಬದುಕು ಸರ್ವನಾಶವಾಯಿತು. ಸರಕಾರಗಳು ಪರಿಹಾರದ ಭರವಸೆ ನೀಡಿದವು. ಆದರೆ ಇದುವರೆಗೂ ಈ ಪರಿಹಾರ ಸಿಕ್ಕಿಲ್ಲ. ಈಗ ಮತ್ತೆ ಮಳೆಗಾಲ ಶುರುವಾಗಿದೆ.

ಪ್ರಳಯಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದರೂ ತಮಗೆ ಏನೂ ಪರಿಹಾರ ಸಿಕ್ಕಿಲ್ಲ ಎನ್ನುತ್ತಾರೆ ಜೋಡುಪಾಲ ಹಾಗೂ ಮೊಣ್ಣಂಗೇರಿಯ ಸಂತ್ರಸ್ತರು. ಬಹುತೇಕ ಮಂದಿಗೆ ನಿರಾಶ್ರಿತರ ಕೇಂದ್ರದಲ್ಲಿರುವ ಸಂದರ್ಭದಲ್ಲಿ ಸಿಕ್ಕಿದ 3800 ರೂ ರೂ ಮಾತ್ರ ಸಿಕ್ಕಿದೆ ಎನ್ನುತ್ತಾರೆ ಜೋಡುಪಾಲದ ಭಾಷಾ. ಮನೆ ನಾಶವಾದವರಿಗೆ ಮನೆ ನಿರ್ಮಿಸುವುದಾಗಿ ಘೋಷಿಸಿ ಕೊಡಗಿನಲ್ಲಿ ಮನೆ ನಿರ್ಮಾಣ ಆರಂಭಿಸಲಾಗಿದ್ದರೂ ಅದು ಪೂರ್ತಿಯಾಗಿಲ್ಲ. ಎಲ್ಲರಿಗೂ ಮನೆ ಯಾವಾಗ ಸಿಗುತ್ತದೆ ಎಂದು ಕಾದು ಜನರ ನಿರೀಕ್ಷೆ ಹುಸಿಯಾಗುತಿದೆ. ನಿರಾಶ್ರಿತರು ಬಾಡಿಗೆ ಮನೆಗೆ 10 ಸಾವಿರ ರೂ ನೀಡುವುದಾಗಿ ಸರಕಾರ ಹೇಳಿತ್ತು. ಕೆಲವರಿಗೆ ಒಂದೆರಡು ತಿಂಗಳಿದ್ದು ಮಾತ್ರ ಸಿಕ್ಕಿದ್ದು ಬಿಟ್ಟರೆ ಬಹುತೇಕರಿಗೆ ಸಿಕ್ಕಿಲ್ಲ ಎನ್ನುತ್ತಾರೆ.

ಮನೆ ಕಳೆದುಕೊಂಡ ಬಳಿಕ ಒಂದು ತಿಂಗಳ 5000 ರೂಪಾಯಿ ಅಂತ ಮನೆ ಬಾಡಿಗೆ ಬಂದಿದೆ, ನಂತರ ಅದೂ ಬಂದಿಲ್ಲ ಎನ್ನುತ್ತಾರೆ ಜೋಡುಪಾಲದ ಲಕ್ಷ್ಮಣ.

ಇಡೀ ಕೃಷಿ ನಾಶವಾದ ಬಳಿಕ ಕೆಲಸವೂ ಇಲ್ಲವಾಗಿದೆ. ಕೂಲಿ ಕೆಲಸ ಮಾಡಿ ಬದುಕು ಸಾಗಿಸಲೂ ಕಷ್ಟವಾಗಿದೆ. ತೋಟದ ಕೆಲಸ ಮಾಡುವ ಎಂದರೆ ತೋಟವೂ ಇಲ್ಲವಾಗಿದೆ .  ಜಲಪ್ರಳಯದ ಬಳಿಕ ಹೊಳೆ ಮೇಲೆ ಬಂದಿದೆ, ಮನೆ ಕೆಳಗೆ ಆಗಿದೆ. ಹೀಗಾಗಿ ಉಳಿದ ಕೃಷಿಗೆ ಈಗ ನೀರೂ ಇಲ್ಲ ಎಂದು ಅಳಲು ತೋಡುತ್ತಾರೆ ಜೋಡುಪಾಲದ ಭಾಷಾ.

ಹಿಂದೆ 1 ಲಕ್ಷ ಆದಾಯ ಇತ್ತು ಕೃಷಿಯಲ್ಲಿ ಈಗ 8 ಸಾವಿರವೂ ಇಲ್ಲ. ಈ ಹಣದಲ್ಲಿ ಬಾಡಿಗೆ ಮನೆ ಮಾಡುವುದು  ಹೇಗೆ . ಕೃಷಿ ಮಾಡಲಾಗುತ್ತಿಲ್ಲ, ಕೂಲಿ ಕೆಲಸ ಇಲ್ಲ, ಭಿಕ್ಷೆ ಬೇಡಲೂ ಆಗುತ್ತಿಲ್ಲ ಎಂದು ಪ್ರಶ್ನೆ ಹೇಳುತ್ತಾರೆ  ಜೋಡುಪಾಲದ ಸುಂದರ ಪೂಜಾರಿ.

 

ಮನೆ ನಾಶ, ಕೃಷಿ ನಾಶವಾದ ಕೆಲವರು ಸಂಪಾಜೆ ಘಾಟಿ ರಸ್ತೆಯ ಪಕ್ಕದಲ್ಲಿ ಟೀ ಸ್ಟಾಲ್, ಸಣ್ಣ ಅಂಗಡಿ, ಜ್ಯೂಸ್ ಅಂಗಡಿ ಇತ್ಯಾದಿ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಸರಕಾರದ ಪರಿಹಾರ, ಮನೆ ನಂಬಿ ಕೂತರೆ ಆಗದು ಎನ್ನುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

4 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

7 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

19 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

19 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago