Advertisement
The Rural Mirror ಫಾಲೋಅಪ್

ಜಲಪ್ರಳಯದಲ್ಲಿ ಪರಿಹಾರವೆಂಬುದು ಮರೀಚಿಕೆಯಾಯ್ತು…!

Share

ಸಂಪಾಜೆ: ಕಳೆದ ವರ್ಷದ ಭೀಕರ ಮಳೆ ಹಾಗೂ ಜಲಪ್ರಳಯದಲ್ಲಿ ಸಂಪಾಜೆ ಭಾಗದ ಮೊಣ್ಣಂಗೇರಿ ಪ್ರದೇಶ ನುಚ್ಚುನೂರಾಯಿತು. ಅಲ್ಲಿದ್ದ ಜನರ ಕೃಷಿ ಸಹಿತ ಬದುಕು ಸರ್ವನಾಶವಾಯಿತು. ಸರಕಾರಗಳು ಪರಿಹಾರದ ಭರವಸೆ ನೀಡಿದವು. ಆದರೆ ಇದುವರೆಗೂ ಈ ಪರಿಹಾರ ಸಿಕ್ಕಿಲ್ಲ. ಈಗ ಮತ್ತೆ ಮಳೆಗಾಲ ಶುರುವಾಗಿದೆ.

Advertisement
Advertisement

ಪ್ರಳಯಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದರೂ ತಮಗೆ ಏನೂ ಪರಿಹಾರ ಸಿಕ್ಕಿಲ್ಲ ಎನ್ನುತ್ತಾರೆ ಜೋಡುಪಾಲ ಹಾಗೂ ಮೊಣ್ಣಂಗೇರಿಯ ಸಂತ್ರಸ್ತರು. ಬಹುತೇಕ ಮಂದಿಗೆ ನಿರಾಶ್ರಿತರ ಕೇಂದ್ರದಲ್ಲಿರುವ ಸಂದರ್ಭದಲ್ಲಿ ಸಿಕ್ಕಿದ 3800 ರೂ ರೂ ಮಾತ್ರ ಸಿಕ್ಕಿದೆ ಎನ್ನುತ್ತಾರೆ ಜೋಡುಪಾಲದ ಭಾಷಾ. ಮನೆ ನಾಶವಾದವರಿಗೆ ಮನೆ ನಿರ್ಮಿಸುವುದಾಗಿ ಘೋಷಿಸಿ ಕೊಡಗಿನಲ್ಲಿ ಮನೆ ನಿರ್ಮಾಣ ಆರಂಭಿಸಲಾಗಿದ್ದರೂ ಅದು ಪೂರ್ತಿಯಾಗಿಲ್ಲ. ಎಲ್ಲರಿಗೂ ಮನೆ ಯಾವಾಗ ಸಿಗುತ್ತದೆ ಎಂದು ಕಾದು ಜನರ ನಿರೀಕ್ಷೆ ಹುಸಿಯಾಗುತಿದೆ. ನಿರಾಶ್ರಿತರು ಬಾಡಿಗೆ ಮನೆಗೆ 10 ಸಾವಿರ ರೂ ನೀಡುವುದಾಗಿ ಸರಕಾರ ಹೇಳಿತ್ತು. ಕೆಲವರಿಗೆ ಒಂದೆರಡು ತಿಂಗಳಿದ್ದು ಮಾತ್ರ ಸಿಕ್ಕಿದ್ದು ಬಿಟ್ಟರೆ ಬಹುತೇಕರಿಗೆ ಸಿಕ್ಕಿಲ್ಲ ಎನ್ನುತ್ತಾರೆ.

ಮನೆ ಕಳೆದುಕೊಂಡ ಬಳಿಕ ಒಂದು ತಿಂಗಳ 5000 ರೂಪಾಯಿ ಅಂತ ಮನೆ ಬಾಡಿಗೆ ಬಂದಿದೆ, ನಂತರ ಅದೂ ಬಂದಿಲ್ಲ ಎನ್ನುತ್ತಾರೆ ಜೋಡುಪಾಲದ ಲಕ್ಷ್ಮಣ.

ಇಡೀ ಕೃಷಿ ನಾಶವಾದ ಬಳಿಕ ಕೆಲಸವೂ ಇಲ್ಲವಾಗಿದೆ. ಕೂಲಿ ಕೆಲಸ ಮಾಡಿ ಬದುಕು ಸಾಗಿಸಲೂ ಕಷ್ಟವಾಗಿದೆ. ತೋಟದ ಕೆಲಸ ಮಾಡುವ ಎಂದರೆ ತೋಟವೂ ಇಲ್ಲವಾಗಿದೆ .  ಜಲಪ್ರಳಯದ ಬಳಿಕ ಹೊಳೆ ಮೇಲೆ ಬಂದಿದೆ, ಮನೆ ಕೆಳಗೆ ಆಗಿದೆ. ಹೀಗಾಗಿ ಉಳಿದ ಕೃಷಿಗೆ ಈಗ ನೀರೂ ಇಲ್ಲ ಎಂದು ಅಳಲು ತೋಡುತ್ತಾರೆ ಜೋಡುಪಾಲದ ಭಾಷಾ.

ಹಿಂದೆ 1 ಲಕ್ಷ ಆದಾಯ ಇತ್ತು ಕೃಷಿಯಲ್ಲಿ ಈಗ 8 ಸಾವಿರವೂ ಇಲ್ಲ. ಈ ಹಣದಲ್ಲಿ ಬಾಡಿಗೆ ಮನೆ ಮಾಡುವುದು  ಹೇಗೆ . ಕೃಷಿ ಮಾಡಲಾಗುತ್ತಿಲ್ಲ, ಕೂಲಿ ಕೆಲಸ ಇಲ್ಲ, ಭಿಕ್ಷೆ ಬೇಡಲೂ ಆಗುತ್ತಿಲ್ಲ ಎಂದು ಪ್ರಶ್ನೆ ಹೇಳುತ್ತಾರೆ  ಜೋಡುಪಾಲದ ಸುಂದರ ಪೂಜಾರಿ.

 

ಮನೆ ನಾಶ, ಕೃಷಿ ನಾಶವಾದ ಕೆಲವರು ಸಂಪಾಜೆ ಘಾಟಿ ರಸ್ತೆಯ ಪಕ್ಕದಲ್ಲಿ ಟೀ ಸ್ಟಾಲ್, ಸಣ್ಣ ಅಂಗಡಿ, ಜ್ಯೂಸ್ ಅಂಗಡಿ ಇತ್ಯಾದಿ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಸರಕಾರದ ಪರಿಹಾರ, ಮನೆ ನಂಬಿ ಕೂತರೆ ಆಗದು ಎನ್ನುತ್ತಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

7 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago