Advertisement
The Rural Mirror ಫಾಲೋಅಪ್

ಜಲಪ್ರಳಯದಲ್ಲಿ ಪರಿಹಾರವೆಂಬುದು ಮರೀಚಿಕೆಯಾಯ್ತು…!

Share

ಸಂಪಾಜೆ: ಕಳೆದ ವರ್ಷದ ಭೀಕರ ಮಳೆ ಹಾಗೂ ಜಲಪ್ರಳಯದಲ್ಲಿ ಸಂಪಾಜೆ ಭಾಗದ ಮೊಣ್ಣಂಗೇರಿ ಪ್ರದೇಶ ನುಚ್ಚುನೂರಾಯಿತು. ಅಲ್ಲಿದ್ದ ಜನರ ಕೃಷಿ ಸಹಿತ ಬದುಕು ಸರ್ವನಾಶವಾಯಿತು. ಸರಕಾರಗಳು ಪರಿಹಾರದ ಭರವಸೆ ನೀಡಿದವು. ಆದರೆ ಇದುವರೆಗೂ ಈ ಪರಿಹಾರ ಸಿಕ್ಕಿಲ್ಲ. ಈಗ ಮತ್ತೆ ಮಳೆಗಾಲ ಶುರುವಾಗಿದೆ.

ಪ್ರಳಯಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದರೂ ತಮಗೆ ಏನೂ ಪರಿಹಾರ ಸಿಕ್ಕಿಲ್ಲ ಎನ್ನುತ್ತಾರೆ ಜೋಡುಪಾಲ ಹಾಗೂ ಮೊಣ್ಣಂಗೇರಿಯ ಸಂತ್ರಸ್ತರು. ಬಹುತೇಕ ಮಂದಿಗೆ ನಿರಾಶ್ರಿತರ ಕೇಂದ್ರದಲ್ಲಿರುವ ಸಂದರ್ಭದಲ್ಲಿ ಸಿಕ್ಕಿದ 3800 ರೂ ರೂ ಮಾತ್ರ ಸಿಕ್ಕಿದೆ ಎನ್ನುತ್ತಾರೆ ಜೋಡುಪಾಲದ ಭಾಷಾ. ಮನೆ ನಾಶವಾದವರಿಗೆ ಮನೆ ನಿರ್ಮಿಸುವುದಾಗಿ ಘೋಷಿಸಿ ಕೊಡಗಿನಲ್ಲಿ ಮನೆ ನಿರ್ಮಾಣ ಆರಂಭಿಸಲಾಗಿದ್ದರೂ ಅದು ಪೂರ್ತಿಯಾಗಿಲ್ಲ. ಎಲ್ಲರಿಗೂ ಮನೆ ಯಾವಾಗ ಸಿಗುತ್ತದೆ ಎಂದು ಕಾದು ಜನರ ನಿರೀಕ್ಷೆ ಹುಸಿಯಾಗುತಿದೆ. ನಿರಾಶ್ರಿತರು ಬಾಡಿಗೆ ಮನೆಗೆ 10 ಸಾವಿರ ರೂ ನೀಡುವುದಾಗಿ ಸರಕಾರ ಹೇಳಿತ್ತು. ಕೆಲವರಿಗೆ ಒಂದೆರಡು ತಿಂಗಳಿದ್ದು ಮಾತ್ರ ಸಿಕ್ಕಿದ್ದು ಬಿಟ್ಟರೆ ಬಹುತೇಕರಿಗೆ ಸಿಕ್ಕಿಲ್ಲ ಎನ್ನುತ್ತಾರೆ.

ಮನೆ ಕಳೆದುಕೊಂಡ ಬಳಿಕ ಒಂದು ತಿಂಗಳ 5000 ರೂಪಾಯಿ ಅಂತ ಮನೆ ಬಾಡಿಗೆ ಬಂದಿದೆ, ನಂತರ ಅದೂ ಬಂದಿಲ್ಲ ಎನ್ನುತ್ತಾರೆ ಜೋಡುಪಾಲದ ಲಕ್ಷ್ಮಣ.

ಇಡೀ ಕೃಷಿ ನಾಶವಾದ ಬಳಿಕ ಕೆಲಸವೂ ಇಲ್ಲವಾಗಿದೆ. ಕೂಲಿ ಕೆಲಸ ಮಾಡಿ ಬದುಕು ಸಾಗಿಸಲೂ ಕಷ್ಟವಾಗಿದೆ. ತೋಟದ ಕೆಲಸ ಮಾಡುವ ಎಂದರೆ ತೋಟವೂ ಇಲ್ಲವಾಗಿದೆ .  ಜಲಪ್ರಳಯದ ಬಳಿಕ ಹೊಳೆ ಮೇಲೆ ಬಂದಿದೆ, ಮನೆ ಕೆಳಗೆ ಆಗಿದೆ. ಹೀಗಾಗಿ ಉಳಿದ ಕೃಷಿಗೆ ಈಗ ನೀರೂ ಇಲ್ಲ ಎಂದು ಅಳಲು ತೋಡುತ್ತಾರೆ ಜೋಡುಪಾಲದ ಭಾಷಾ.

ಹಿಂದೆ 1 ಲಕ್ಷ ಆದಾಯ ಇತ್ತು ಕೃಷಿಯಲ್ಲಿ ಈಗ 8 ಸಾವಿರವೂ ಇಲ್ಲ. ಈ ಹಣದಲ್ಲಿ ಬಾಡಿಗೆ ಮನೆ ಮಾಡುವುದು  ಹೇಗೆ . ಕೃಷಿ ಮಾಡಲಾಗುತ್ತಿಲ್ಲ, ಕೂಲಿ ಕೆಲಸ ಇಲ್ಲ, ಭಿಕ್ಷೆ ಬೇಡಲೂ ಆಗುತ್ತಿಲ್ಲ ಎಂದು ಪ್ರಶ್ನೆ ಹೇಳುತ್ತಾರೆ  ಜೋಡುಪಾಲದ ಸುಂದರ ಪೂಜಾರಿ.

 

ಮನೆ ನಾಶ, ಕೃಷಿ ನಾಶವಾದ ಕೆಲವರು ಸಂಪಾಜೆ ಘಾಟಿ ರಸ್ತೆಯ ಪಕ್ಕದಲ್ಲಿ ಟೀ ಸ್ಟಾಲ್, ಸಣ್ಣ ಅಂಗಡಿ, ಜ್ಯೂಸ್ ಅಂಗಡಿ ಇತ್ಯಾದಿ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಸರಕಾರದ ಪರಿಹಾರ, ಮನೆ ನಂಬಿ ಕೂತರೆ ಆಗದು ಎನ್ನುತ್ತಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

3 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

4 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

6 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

6 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

20 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago