Advertisement
The Rural Mirror ಫಾಲೋಅಪ್

ಜಲಪ್ರಳಯದ ನಂತರ ಸಂಪರ್ಕ ಪಡೆದುಕೊಂಡ ಗ್ರಾಮಗಳು..!

Share

ಸಂಪಾಜೆ: ಜಲಪ್ರಳಯದ ನಂತರ ಅನೇಕರು ಹೇಳಿಬಿಟ್ಟರು, ಇನ್ನು ವರ್ಷಗಳವರೆಗೆ ಮಂಗಳೂರಿನಿಂದ ಜೋಡುಪಾಲ ಮಾರ್ಗವಾಗಿ  ಕೊಡಗು ಸಂಪರ್ಕ ಕಷ್ಟ ಅಂತ. ಆದರೆ ಒಂದೆರಡು ತಿಂಗಳಲ್ಲಿ  ನಮ್ಮ ಇಂಜಿನಿಯರ್ ಗಳು ಹೇಳಿದರು….” ಎರಡು ದಿನದಲ್ಲಿ ಕೊಡಗು ಸಂಪರ್ಕ ಸಾಧ್ಯ “.  ಇದು ನಮ್ಮ ದೇಶದ, ನಮ್ಮ ಜಿಲ್ಲೆಯ ಹೆಮ್ಮೆ.

ದೂರದ ಎಲ್ಲೋ ಪ್ರಾಕೃತಿಕ ವಿಕೋಪ ನಡೆದ ಸಂದರ್ಭ ಕೆಲವೇ ದಿನದಲ್ಲಿ ರಸ್ತೆ ಸಂಪರ್ಕ ಮಾಡಿದ ಸರಕಾರ, ಇಂಜಿನಿಯರ್ ಗಳು ಅಂತ ಆಗಾಗ ಹೇಳುತ್ತಾರೆ. ಇಲ್ಲೂ ಅಂತಹ ಇಂಜಿನಿಯರ್ ಗಳು ಇದ್ದಾರೆ ಎಂಬುದನ್ನು ಅಂದು ಸಾಬೀತು ಮಾಡಿದ್ದರು. ಅಂದಿನ ಜಲಪ್ರಳಯ ನೋಡಿದ ಎಲ್ಲರೂ ಹೇಳಿದ್ದು ಒಂದೇ ಮಾತು ” ಕೊಡಗು ಸಂಪರ್ಕ ಇನ್ನು ಕಷ್ಟ” . ಇದನ್ನು ಸವಾಲಾಗಿ ಸ್ವೀಕರಿಸಿ ನಮ್ಮ ಇಲಾಖೆಯ ಇಂಜಿನಿಯರ್ ಗಳ ತಂಡ ಸತತ ಪ್ರಯತ್ನದ ಮೂಲಕ ಗುಣಮಟ್ಟದ ರಸ್ತೆ ಮಾಡಿದ್ದರು. ಈ ಬಾರಿಯ ಮಳೆಗಾಲಕ್ಕೂ ಅದೇ ಮಾದರಿಯ ಮುಂಜಾಗ್ರತೆ ಕೈಗೊಳ್ಳುವ ಸಾಮರ್ಥ್ಯವೂ ಅವರಲ್ಲಿದೆ. ಅದಕ್ಕೆ ಬೇಕಾದ್ದು ಜನನಾಯಕರ ಇಚ್ಛಾಶಕ್ತಿ ಅಷ್ಟೇ.

ಸುಳ್ಯ- ಕೊಡಗು ರಸ್ತೆಯ ಬಗ್ಗೆ ಮಾತ್ರಾ ಹೇಳಿದರೆ ತಪ್ಪಾದೀತು. ಮೊಣ್ಣಂಗೇರಿಯ ತುದಿಯವರೆಗೆ ಕಾಂಕ್ರೀಟ್ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲಿನ ನಿವಾಸಿ ಜಯರಾಮ್ ಹೇಳುವುದು,” ಸರ್ ನಮಗೆ ಜಲಪ್ರಳಯದಿಂದ ಲಾಭ ಏನಾಯಿತು ಅಂದರೆ ನಮ್ಮ ಮನೆಯ ಪಕ್ಕದವರೆಗೆ ಕಾಂಕ್ರೀಟ್ ರಸ್ತೆ…”. ಲಕ್ಷಾಂತರ ರೂಪಾಯಿ ನಷ್ಟವಾಯಿತು, ಕೃಷಿ ಭೂಮಿ ಹಾನಿಯಾಯಿತು. ಆದರೆ ಸಂಪರ್ಕ ರಸ್ತೆಯೇ ನಾಶವಾಗಿತ್ತು, ಅದನ್ನು ತಕ್ಷಣ ಮಾಡಿಸಿ ಈಗ ಪೇಟೆಗೆ ಹೋಗುವಂತಾಗಿದೆ ಎಂದು ಸಾಮಾನ್ಯ  ವ್ಯಕ್ತಿಯೂ ಹೇಳುತ್ತಾನಾದರೆ ನಮ್ಮ ಇಂಜಿನಿಯರ್ ಗಳ ಶಕ್ತಿ, ಸಾಮರ್ಥದ ಬಗ್ಗೆ ಬಹುದೊಡ್ಡ ಸಲಾಂ ಹೇಳಲೇಬೇಕು. ಮೊಣ್ಣಂಗೇರಿಯ ಅಭಿವೃದ್ಧಿಗೆ ಅಲ್ಲಿನ ಪಂಚಾಯತ್ ಕೂಡಾ ಅನುದಾನದ ವ್ಯವಸ್ಥೆ ಮಾಡಿತು, ವಿವಿಧ ಸಹಕಾರಗಳು ದೊರೆತವು. ಹೀಗಾಗಿ ಇದೆಲ್ಲಾ ಸಾಧ್ಯವಾಯಿತು.

ಮೊಣ್ಣಂಗೇರಿಯಲ್ಲಿ ಕಾಂಕ್ರೀಟ್ ರಸ್ತೆ

 

ವರ್ಷದೊಳಗೆ ಅಲ್ಲ, ತಿಂಗಳೊಳಗೆ ಸಂಪರ್ಕ ವ್ಯವಸ್ಥೆ ಮಾಡಿಸಿದ ಇಂಜಿನಿಯರ್ ಗಳನ್ನು, ಅಧಿಕಾರಿಗಳನ್ನು  ಮೊಣ್ಣಂಗೇರಿ ಜನ  ನೆನಪಿಸಿಕೊಂಡರೆ ಸುಳ್ಯ – ಮಡಿಕೇರಿ ರಸ್ತೆ ದುರಸ್ತಿ ಮಾಡಿಸಿ ತಿಂಗಳೊಳಗೆ ಸಂಪರ್ಕ ಮಾಡಿದ್ದನ್ನು  ಸಾರ್ವಜನಿಕರು ನೆನಪಿಸಿಕೊಳ್ಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

20 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago