Advertisement
The Rural Mirror ಫಾಲೋಅಪ್

ಜಲಪ್ರಳಯದ ನಂತರ ಸಂಪರ್ಕ ಪಡೆದುಕೊಂಡ ಗ್ರಾಮಗಳು..!

Share

ಸಂಪಾಜೆ: ಜಲಪ್ರಳಯದ ನಂತರ ಅನೇಕರು ಹೇಳಿಬಿಟ್ಟರು, ಇನ್ನು ವರ್ಷಗಳವರೆಗೆ ಮಂಗಳೂರಿನಿಂದ ಜೋಡುಪಾಲ ಮಾರ್ಗವಾಗಿ  ಕೊಡಗು ಸಂಪರ್ಕ ಕಷ್ಟ ಅಂತ. ಆದರೆ ಒಂದೆರಡು ತಿಂಗಳಲ್ಲಿ  ನಮ್ಮ ಇಂಜಿನಿಯರ್ ಗಳು ಹೇಳಿದರು….” ಎರಡು ದಿನದಲ್ಲಿ ಕೊಡಗು ಸಂಪರ್ಕ ಸಾಧ್ಯ “.  ಇದು ನಮ್ಮ ದೇಶದ, ನಮ್ಮ ಜಿಲ್ಲೆಯ ಹೆಮ್ಮೆ.

ದೂರದ ಎಲ್ಲೋ ಪ್ರಾಕೃತಿಕ ವಿಕೋಪ ನಡೆದ ಸಂದರ್ಭ ಕೆಲವೇ ದಿನದಲ್ಲಿ ರಸ್ತೆ ಸಂಪರ್ಕ ಮಾಡಿದ ಸರಕಾರ, ಇಂಜಿನಿಯರ್ ಗಳು ಅಂತ ಆಗಾಗ ಹೇಳುತ್ತಾರೆ. ಇಲ್ಲೂ ಅಂತಹ ಇಂಜಿನಿಯರ್ ಗಳು ಇದ್ದಾರೆ ಎಂಬುದನ್ನು ಅಂದು ಸಾಬೀತು ಮಾಡಿದ್ದರು. ಅಂದಿನ ಜಲಪ್ರಳಯ ನೋಡಿದ ಎಲ್ಲರೂ ಹೇಳಿದ್ದು ಒಂದೇ ಮಾತು ” ಕೊಡಗು ಸಂಪರ್ಕ ಇನ್ನು ಕಷ್ಟ” . ಇದನ್ನು ಸವಾಲಾಗಿ ಸ್ವೀಕರಿಸಿ ನಮ್ಮ ಇಲಾಖೆಯ ಇಂಜಿನಿಯರ್ ಗಳ ತಂಡ ಸತತ ಪ್ರಯತ್ನದ ಮೂಲಕ ಗುಣಮಟ್ಟದ ರಸ್ತೆ ಮಾಡಿದ್ದರು. ಈ ಬಾರಿಯ ಮಳೆಗಾಲಕ್ಕೂ ಅದೇ ಮಾದರಿಯ ಮುಂಜಾಗ್ರತೆ ಕೈಗೊಳ್ಳುವ ಸಾಮರ್ಥ್ಯವೂ ಅವರಲ್ಲಿದೆ. ಅದಕ್ಕೆ ಬೇಕಾದ್ದು ಜನನಾಯಕರ ಇಚ್ಛಾಶಕ್ತಿ ಅಷ್ಟೇ.

ಸುಳ್ಯ- ಕೊಡಗು ರಸ್ತೆಯ ಬಗ್ಗೆ ಮಾತ್ರಾ ಹೇಳಿದರೆ ತಪ್ಪಾದೀತು. ಮೊಣ್ಣಂಗೇರಿಯ ತುದಿಯವರೆಗೆ ಕಾಂಕ್ರೀಟ್ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲಿನ ನಿವಾಸಿ ಜಯರಾಮ್ ಹೇಳುವುದು,” ಸರ್ ನಮಗೆ ಜಲಪ್ರಳಯದಿಂದ ಲಾಭ ಏನಾಯಿತು ಅಂದರೆ ನಮ್ಮ ಮನೆಯ ಪಕ್ಕದವರೆಗೆ ಕಾಂಕ್ರೀಟ್ ರಸ್ತೆ…”. ಲಕ್ಷಾಂತರ ರೂಪಾಯಿ ನಷ್ಟವಾಯಿತು, ಕೃಷಿ ಭೂಮಿ ಹಾನಿಯಾಯಿತು. ಆದರೆ ಸಂಪರ್ಕ ರಸ್ತೆಯೇ ನಾಶವಾಗಿತ್ತು, ಅದನ್ನು ತಕ್ಷಣ ಮಾಡಿಸಿ ಈಗ ಪೇಟೆಗೆ ಹೋಗುವಂತಾಗಿದೆ ಎಂದು ಸಾಮಾನ್ಯ  ವ್ಯಕ್ತಿಯೂ ಹೇಳುತ್ತಾನಾದರೆ ನಮ್ಮ ಇಂಜಿನಿಯರ್ ಗಳ ಶಕ್ತಿ, ಸಾಮರ್ಥದ ಬಗ್ಗೆ ಬಹುದೊಡ್ಡ ಸಲಾಂ ಹೇಳಲೇಬೇಕು. ಮೊಣ್ಣಂಗೇರಿಯ ಅಭಿವೃದ್ಧಿಗೆ ಅಲ್ಲಿನ ಪಂಚಾಯತ್ ಕೂಡಾ ಅನುದಾನದ ವ್ಯವಸ್ಥೆ ಮಾಡಿತು, ವಿವಿಧ ಸಹಕಾರಗಳು ದೊರೆತವು. ಹೀಗಾಗಿ ಇದೆಲ್ಲಾ ಸಾಧ್ಯವಾಯಿತು.

ಮೊಣ್ಣಂಗೇರಿಯಲ್ಲಿ ಕಾಂಕ್ರೀಟ್ ರಸ್ತೆ

 

ವರ್ಷದೊಳಗೆ ಅಲ್ಲ, ತಿಂಗಳೊಳಗೆ ಸಂಪರ್ಕ ವ್ಯವಸ್ಥೆ ಮಾಡಿಸಿದ ಇಂಜಿನಿಯರ್ ಗಳನ್ನು, ಅಧಿಕಾರಿಗಳನ್ನು  ಮೊಣ್ಣಂಗೇರಿ ಜನ  ನೆನಪಿಸಿಕೊಂಡರೆ ಸುಳ್ಯ – ಮಡಿಕೇರಿ ರಸ್ತೆ ದುರಸ್ತಿ ಮಾಡಿಸಿ ತಿಂಗಳೊಳಗೆ ಸಂಪರ್ಕ ಮಾಡಿದ್ದನ್ನು  ಸಾರ್ವಜನಿಕರು ನೆನಪಿಸಿಕೊಳ್ಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

3 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

22 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago