ಸಂಪಾಜೆ: ಜಲಪ್ರಳಯದ ನಂತರ ಅನೇಕರು ಹೇಳಿಬಿಟ್ಟರು, ಇನ್ನು ವರ್ಷಗಳವರೆಗೆ ಮಂಗಳೂರಿನಿಂದ ಜೋಡುಪಾಲ ಮಾರ್ಗವಾಗಿ ಕೊಡಗು ಸಂಪರ್ಕ ಕಷ್ಟ ಅಂತ. ಆದರೆ ಒಂದೆರಡು ತಿಂಗಳಲ್ಲಿ ನಮ್ಮ ಇಂಜಿನಿಯರ್ ಗಳು ಹೇಳಿದರು….” ಎರಡು ದಿನದಲ್ಲಿ ಕೊಡಗು ಸಂಪರ್ಕ ಸಾಧ್ಯ “. ಇದು ನಮ್ಮ ದೇಶದ, ನಮ್ಮ ಜಿಲ್ಲೆಯ ಹೆಮ್ಮೆ.
ದೂರದ ಎಲ್ಲೋ ಪ್ರಾಕೃತಿಕ ವಿಕೋಪ ನಡೆದ ಸಂದರ್ಭ ಕೆಲವೇ ದಿನದಲ್ಲಿ ರಸ್ತೆ ಸಂಪರ್ಕ ಮಾಡಿದ ಸರಕಾರ, ಇಂಜಿನಿಯರ್ ಗಳು ಅಂತ ಆಗಾಗ ಹೇಳುತ್ತಾರೆ. ಇಲ್ಲೂ ಅಂತಹ ಇಂಜಿನಿಯರ್ ಗಳು ಇದ್ದಾರೆ ಎಂಬುದನ್ನು ಅಂದು ಸಾಬೀತು ಮಾಡಿದ್ದರು. ಅಂದಿನ ಜಲಪ್ರಳಯ ನೋಡಿದ ಎಲ್ಲರೂ ಹೇಳಿದ್ದು ಒಂದೇ ಮಾತು ” ಕೊಡಗು ಸಂಪರ್ಕ ಇನ್ನು ಕಷ್ಟ” . ಇದನ್ನು ಸವಾಲಾಗಿ ಸ್ವೀಕರಿಸಿ ನಮ್ಮ ಇಲಾಖೆಯ ಇಂಜಿನಿಯರ್ ಗಳ ತಂಡ ಸತತ ಪ್ರಯತ್ನದ ಮೂಲಕ ಗುಣಮಟ್ಟದ ರಸ್ತೆ ಮಾಡಿದ್ದರು. ಈ ಬಾರಿಯ ಮಳೆಗಾಲಕ್ಕೂ ಅದೇ ಮಾದರಿಯ ಮುಂಜಾಗ್ರತೆ ಕೈಗೊಳ್ಳುವ ಸಾಮರ್ಥ್ಯವೂ ಅವರಲ್ಲಿದೆ. ಅದಕ್ಕೆ ಬೇಕಾದ್ದು ಜನನಾಯಕರ ಇಚ್ಛಾಶಕ್ತಿ ಅಷ್ಟೇ.
ಸುಳ್ಯ- ಕೊಡಗು ರಸ್ತೆಯ ಬಗ್ಗೆ ಮಾತ್ರಾ ಹೇಳಿದರೆ ತಪ್ಪಾದೀತು. ಮೊಣ್ಣಂಗೇರಿಯ ತುದಿಯವರೆಗೆ ಕಾಂಕ್ರೀಟ್ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲಿನ ನಿವಾಸಿ ಜಯರಾಮ್ ಹೇಳುವುದು,” ಸರ್ ನಮಗೆ ಜಲಪ್ರಳಯದಿಂದ ಲಾಭ ಏನಾಯಿತು ಅಂದರೆ ನಮ್ಮ ಮನೆಯ ಪಕ್ಕದವರೆಗೆ ಕಾಂಕ್ರೀಟ್ ರಸ್ತೆ…”. ಲಕ್ಷಾಂತರ ರೂಪಾಯಿ ನಷ್ಟವಾಯಿತು, ಕೃಷಿ ಭೂಮಿ ಹಾನಿಯಾಯಿತು. ಆದರೆ ಸಂಪರ್ಕ ರಸ್ತೆಯೇ ನಾಶವಾಗಿತ್ತು, ಅದನ್ನು ತಕ್ಷಣ ಮಾಡಿಸಿ ಈಗ ಪೇಟೆಗೆ ಹೋಗುವಂತಾಗಿದೆ ಎಂದು ಸಾಮಾನ್ಯ ವ್ಯಕ್ತಿಯೂ ಹೇಳುತ್ತಾನಾದರೆ ನಮ್ಮ ಇಂಜಿನಿಯರ್ ಗಳ ಶಕ್ತಿ, ಸಾಮರ್ಥದ ಬಗ್ಗೆ ಬಹುದೊಡ್ಡ ಸಲಾಂ ಹೇಳಲೇಬೇಕು. ಮೊಣ್ಣಂಗೇರಿಯ ಅಭಿವೃದ್ಧಿಗೆ ಅಲ್ಲಿನ ಪಂಚಾಯತ್ ಕೂಡಾ ಅನುದಾನದ ವ್ಯವಸ್ಥೆ ಮಾಡಿತು, ವಿವಿಧ ಸಹಕಾರಗಳು ದೊರೆತವು. ಹೀಗಾಗಿ ಇದೆಲ್ಲಾ ಸಾಧ್ಯವಾಯಿತು.
ವರ್ಷದೊಳಗೆ ಅಲ್ಲ, ತಿಂಗಳೊಳಗೆ ಸಂಪರ್ಕ ವ್ಯವಸ್ಥೆ ಮಾಡಿಸಿದ ಇಂಜಿನಿಯರ್ ಗಳನ್ನು, ಅಧಿಕಾರಿಗಳನ್ನು ಮೊಣ್ಣಂಗೇರಿ ಜನ ನೆನಪಿಸಿಕೊಂಡರೆ ಸುಳ್ಯ – ಮಡಿಕೇರಿ ರಸ್ತೆ ದುರಸ್ತಿ ಮಾಡಿಸಿ ತಿಂಗಳೊಳಗೆ ಸಂಪರ್ಕ ಮಾಡಿದ್ದನ್ನು ಸಾರ್ವಜನಿಕರು ನೆನಪಿಸಿಕೊಳ್ಳುತ್ತಾರೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…