Advertisement
MIRROR FOCUS

ಜಲಪ್ರಳಯವು ಮೊಣ್ಣಂಗೇರಿಯ ವಿದ್ಯಾ ದೇಗುಲವನ್ನು ನುಂಗಿತು….!

Share

ಸಂಪಾಜೆ : ಮೊಣ್ಣಂಗೇರಿಯ ಆ ಸರಕಾರಿ ಶಾಲೆಗೆ ಪುಟ್ಟ ಪುಟ್ಟ ಹೆಜ್ಜೆಗಳನ್ನಿಟ್ಟು, ಮಳೆಗೆ ಒದ್ದೆಯಾಗಿ ಬಂದು ಸಂಭ್ರಮಿಸುತ್ತಿದ್ದ ಮಕ್ಕಳ ಮನೆ ಪಕ್ಕದ ಪ್ರಾಥಮಿಕ ಶಾಲೆಗೆ ಬೀಗ ಬಿದ್ದು ವರ್ಷ ಕಳೆದಿದೆ.

Advertisement
Advertisement

ಮೊಣ್ಣಂಗೇರಿಯ ಪ್ರದೇಶದ ಜನರು ಆಗಸ್ಟ್ ತಿಂಗಳು, ಮಳೆಗಾಲ ಎಂದಾಗ ಈಗಲೂ ಕರಾಳ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ. ಅದರಲ್ಲಿ ಒಂದು ಭಾಗ ಮಕ್ಕಳ ವಿದ್ಯಾಭ್ಯಾಸ. ಜಲಪ್ರಳಯದ ಕಾರಣದಿಂದ ಮಕ್ಕಳ ಶಿಕ್ಷಣದ ಮೇಲೂ ಪರಿಣಾಮವಾಯಿತು. ಇಡೀ ಗ್ರಾಮದ ಕಿರೀಟದಂತಿದ್ದ ಶಾಲೆ ಕಳೆದ ಆಗಸ್ಟ್ ನಂತರ ಇಂದಿನವರೆಗೂ ತೆರಯಲಿಲ್ಲ..!

ಎರಡನೇ ಮೊಣ್ಣಂಗೇರಿಯಲ್ಲಿ  ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇತ್ತು. ಸುಮಾರು 25 ರಿಂದ 30 ಮಕ್ಕಳು ಈ ಶಾಲೆಯಲ್ಲಿ  ಓದುತ್ತಿದ್ದರು. ಅಂಗನವಾಡಿಯೂ ಇಲ್ಲೇ ಹತ್ತಿರದಲ್ಲಿ ಇತ್ತು.  ಸದಾ ಮಕ್ಕಳ ಕಲರವ, ಲವಲವಿಕೆ ನಲಿದಾಡುತ್ತಿದ್ದ ಮೊಣ್ಣಂಗೇರಿಯ ಈ ಕಿರಿಯ ಪ್ರಾಥಮಿಕ ಶಾಲೆ ಪ್ರಳಯದ ನಂತರ ತೆರೆಯಲೇ ಇಲ್ಲ.  ಹಲವು ತಿಂಗಳುಗಳ ಕಾಲ ಮನೆಗಳ ಬಾಗಿಲು ಮುಚ್ಚಿದ್ದ ಕಾರಣ ಮಕ್ಕಳು ಶಾಲೆಗೆ ಬಾರದಂತಾದರು. ಬಳಿಕ ಇಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ಪೋಷಕರು ಸಂಬಂಧಿಕರಲ್ಲಿಂದ ಹಾಸ್ಟೆಲ್ ಗಳಿಂದ ಹಾಗೂ  ಮತ್ತಿತರ ಕಡೆ ಶಾಲೆಗಳಿಗೆ ಸೇರಿಸಿದರು. ಪ್ರಳಯದ ನೋವಿನ ಜೊತೆಗೆ ಮಕ್ಕಳಿಂದಲೂ ದೂರ ಉಳಿಯಬೇಕಾದ ಮಾನಸಿಕ ಸ್ಥಿತಿ ಇಲ್ಲಿನ ಜನರದ್ದಾಯಿತು.

ಕಳೆದ ಆಗಸ್ಟ್ ನಂತರ  ಈ ಶಾಲೆಗೆ ಮಕ್ಕಳನ್ನು  ಕಳಿಸಲು ಸಾಧ್ಯವಾಗಲಿಲ್ಲ ಎನ್ನುತ್ತಾರೆ ಮೊಣ್ಣಂಗೇರಿಯ ಸುನಿತಾ.

ನಮ್ಮ ಬದುಕು ಹಾಗಾಯಿತು. ಆದರೆ ಮಕ್ಕಳ ಶಿಕ್ಷಣವೂ ಕುಂಠಿತವಾಗುವುದು ಬೇಡವೆಂದು ದೂರದ ಶಾಲೆಗೆ ಹಾಕಿದ್ದೇವೆ. ಈ ವರ್ಷವೂ ಕುಸಿತವಾದರೆ ಮಕ್ಕಳ ಬದುಕು ಹೇಗೆ ಎಂಬ ಚಿಂತೆಯಲ್ಲಿದ್ದಾರೆ ಮೊಣ್ಣಂಗೇರಿಯ ವನಿತಾ.

ಇದ್ದುದರಲ್ಲಿ ಒಳ್ಳೆಯದಿತ್ತು ಮೊಣ್ಣಂಗೇರಿಯ ಶಾಲೆ, ಆದರೆ ಏನು ಮಾಡೋಣ, ಜಲಪ್ರಳಯದ ಕಾರಣದಿಂದ ಎಲ್ಲಾ ವ್ಯವಸ್ಥೆಯೂ ಬದಲಾಗಬೇಕಾಯಿತು. ಹೇಗೋ ಬದುಕು ಸಾಗಿಸುತ್ತೇವೆ. ನಮಗೆ ಕಷ್ಟವಾದರೂ ಚಿಂತೆ ಇಲ್ಲ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎನ್ನುವುದು  ಸುಂದರ ನಾಯ್ಕ್ ಅವರ ಅಭಿಪ್ರಾಯ.

 

ಇಂದಿಗೂ ಮೊಣ್ಣಂಗೇರಿಯ ಶಾಲೆ ಸುಂದರವಾದ ಕಟ್ಟಡಿಂದ ಕಂಗೊಳಿಸುತ್ತಿದೆ, ಮೇಲಿನ ಪ್ರದೇಶದ ಗುಡ್ಡ ಬಾಯಿ ತೆರೆದು ನಿಂತಿದೆ. ಈ ಮಳೆಗಾಲ ಏನಾಗುತ್ತೋ ಎಂಬ ಅವ್ಯಕ್ತ  ಭಯ ಆ ಪ್ರದೇಶದ ಜನರಲ್ಲಿ ಕಾಣುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

10 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago