Advertisement
MIRROR FOCUS

ಜಲಪ್ರಳಯವು ಮೊಣ್ಣಂಗೇರಿಯ ವಿದ್ಯಾ ದೇಗುಲವನ್ನು ನುಂಗಿತು….!

Share

ಸಂಪಾಜೆ : ಮೊಣ್ಣಂಗೇರಿಯ ಆ ಸರಕಾರಿ ಶಾಲೆಗೆ ಪುಟ್ಟ ಪುಟ್ಟ ಹೆಜ್ಜೆಗಳನ್ನಿಟ್ಟು, ಮಳೆಗೆ ಒದ್ದೆಯಾಗಿ ಬಂದು ಸಂಭ್ರಮಿಸುತ್ತಿದ್ದ ಮಕ್ಕಳ ಮನೆ ಪಕ್ಕದ ಪ್ರಾಥಮಿಕ ಶಾಲೆಗೆ ಬೀಗ ಬಿದ್ದು ವರ್ಷ ಕಳೆದಿದೆ.

ಮೊಣ್ಣಂಗೇರಿಯ ಪ್ರದೇಶದ ಜನರು ಆಗಸ್ಟ್ ತಿಂಗಳು, ಮಳೆಗಾಲ ಎಂದಾಗ ಈಗಲೂ ಕರಾಳ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ. ಅದರಲ್ಲಿ ಒಂದು ಭಾಗ ಮಕ್ಕಳ ವಿದ್ಯಾಭ್ಯಾಸ. ಜಲಪ್ರಳಯದ ಕಾರಣದಿಂದ ಮಕ್ಕಳ ಶಿಕ್ಷಣದ ಮೇಲೂ ಪರಿಣಾಮವಾಯಿತು. ಇಡೀ ಗ್ರಾಮದ ಕಿರೀಟದಂತಿದ್ದ ಶಾಲೆ ಕಳೆದ ಆಗಸ್ಟ್ ನಂತರ ಇಂದಿನವರೆಗೂ ತೆರಯಲಿಲ್ಲ..!

ಎರಡನೇ ಮೊಣ್ಣಂಗೇರಿಯಲ್ಲಿ  ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇತ್ತು. ಸುಮಾರು 25 ರಿಂದ 30 ಮಕ್ಕಳು ಈ ಶಾಲೆಯಲ್ಲಿ  ಓದುತ್ತಿದ್ದರು. ಅಂಗನವಾಡಿಯೂ ಇಲ್ಲೇ ಹತ್ತಿರದಲ್ಲಿ ಇತ್ತು.  ಸದಾ ಮಕ್ಕಳ ಕಲರವ, ಲವಲವಿಕೆ ನಲಿದಾಡುತ್ತಿದ್ದ ಮೊಣ್ಣಂಗೇರಿಯ ಈ ಕಿರಿಯ ಪ್ರಾಥಮಿಕ ಶಾಲೆ ಪ್ರಳಯದ ನಂತರ ತೆರೆಯಲೇ ಇಲ್ಲ.  ಹಲವು ತಿಂಗಳುಗಳ ಕಾಲ ಮನೆಗಳ ಬಾಗಿಲು ಮುಚ್ಚಿದ್ದ ಕಾರಣ ಮಕ್ಕಳು ಶಾಲೆಗೆ ಬಾರದಂತಾದರು. ಬಳಿಕ ಇಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ಪೋಷಕರು ಸಂಬಂಧಿಕರಲ್ಲಿಂದ ಹಾಸ್ಟೆಲ್ ಗಳಿಂದ ಹಾಗೂ  ಮತ್ತಿತರ ಕಡೆ ಶಾಲೆಗಳಿಗೆ ಸೇರಿಸಿದರು. ಪ್ರಳಯದ ನೋವಿನ ಜೊತೆಗೆ ಮಕ್ಕಳಿಂದಲೂ ದೂರ ಉಳಿಯಬೇಕಾದ ಮಾನಸಿಕ ಸ್ಥಿತಿ ಇಲ್ಲಿನ ಜನರದ್ದಾಯಿತು.

ಕಳೆದ ಆಗಸ್ಟ್ ನಂತರ  ಈ ಶಾಲೆಗೆ ಮಕ್ಕಳನ್ನು  ಕಳಿಸಲು ಸಾಧ್ಯವಾಗಲಿಲ್ಲ ಎನ್ನುತ್ತಾರೆ ಮೊಣ್ಣಂಗೇರಿಯ ಸುನಿತಾ.

ನಮ್ಮ ಬದುಕು ಹಾಗಾಯಿತು. ಆದರೆ ಮಕ್ಕಳ ಶಿಕ್ಷಣವೂ ಕುಂಠಿತವಾಗುವುದು ಬೇಡವೆಂದು ದೂರದ ಶಾಲೆಗೆ ಹಾಕಿದ್ದೇವೆ. ಈ ವರ್ಷವೂ ಕುಸಿತವಾದರೆ ಮಕ್ಕಳ ಬದುಕು ಹೇಗೆ ಎಂಬ ಚಿಂತೆಯಲ್ಲಿದ್ದಾರೆ ಮೊಣ್ಣಂಗೇರಿಯ ವನಿತಾ.

ಇದ್ದುದರಲ್ಲಿ ಒಳ್ಳೆಯದಿತ್ತು ಮೊಣ್ಣಂಗೇರಿಯ ಶಾಲೆ, ಆದರೆ ಏನು ಮಾಡೋಣ, ಜಲಪ್ರಳಯದ ಕಾರಣದಿಂದ ಎಲ್ಲಾ ವ್ಯವಸ್ಥೆಯೂ ಬದಲಾಗಬೇಕಾಯಿತು. ಹೇಗೋ ಬದುಕು ಸಾಗಿಸುತ್ತೇವೆ. ನಮಗೆ ಕಷ್ಟವಾದರೂ ಚಿಂತೆ ಇಲ್ಲ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎನ್ನುವುದು  ಸುಂದರ ನಾಯ್ಕ್ ಅವರ ಅಭಿಪ್ರಾಯ.

 

ಇಂದಿಗೂ ಮೊಣ್ಣಂಗೇರಿಯ ಶಾಲೆ ಸುಂದರವಾದ ಕಟ್ಟಡಿಂದ ಕಂಗೊಳಿಸುತ್ತಿದೆ, ಮೇಲಿನ ಪ್ರದೇಶದ ಗುಡ್ಡ ಬಾಯಿ ತೆರೆದು ನಿಂತಿದೆ. ಈ ಮಳೆಗಾಲ ಏನಾಗುತ್ತೋ ಎಂಬ ಅವ್ಯಕ್ತ  ಭಯ ಆ ಪ್ರದೇಶದ ಜನರಲ್ಲಿ ಕಾಣುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

3 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

12 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

16 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago