ಸುಳ್ಯ: ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಹೃದಯವಿಲ್ಲದ ಹತ್ಯಾಕಾಂಡಕ್ಕೆ ಸಾಕ್ಷಿಯಾಯಿತು. ಆಂಗ್ಲರ ಕಠಿಣ ಮತ್ತು ಕ್ರೂರವಾದ ಧೋರಣೆಗಳು ಭಾರತೀಯ ದೇಶ ಭಕ್ತರಲ್ಲಿ ಸ್ವಾತಂತ್ರದ ಕೆಚ್ಚನ್ನು , ಶ್ರದ್ಧೆಯನ್ನು ಹೆಚ್ಚಿಸಿತು ಎಂದು ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯಇಲ್ಲಿನ ಮಾನವಿಕ ಸಂಘದಿಂದ ಏರ್ಪಡಿಸಲಾದ ” ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ನಮಗೆ ಸ್ವಾತಂತ್ಯ ದೊರಕಿದುದರ ಹಿಂದೆ ಅದೆಷ್ಟೋ ಜನರ ಕಣ್ಣೀರ ಕಥೆಯಿದೆ , ಸ್ವಾತಂತ್ರ್ಯದ ಸಿಹಿಯ ಹಿಂದಿನ ಕಹಿಯನ್ನು ತಿಳಿದುಕೊಳ್ಳಬೇಕು ಮತ್ತು ಸ್ವಾತಂತ್ರ್ಯದ ಸದುಪಯೋಗ ಮುಖ್ಯ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯರು ಮಾತನಾಡಿ ಇತಿಹಾಸವನ್ನು ಏಕಮುಖವಾಗಿ ನೋಡುವುದಲ್ಲ , ಈ ನೆಲದ ಅಂತರಾಳದ ನೋವನ್ನು ತಿಳಿದುಕೊಳ್ಳಬೇಕು , ಇತಿಹಾಸದ ದುರಂತ ಮನುಕುಲಕ್ಕೆ ಪಾಠವಾಗಬೇಕು ಮತ್ತು ಹೊರಜಗತ್ತಿನ ಸಂಘರ್ಷಗಳು ಬಲಿಷ್ಠವಾಗಿ ಬೆಳೆಯಲು ಸಹಾಯವಾಗಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಮಾನವಿಕ ಸಂಘದ ನಿರ್ದೇಶಕಿ ಉಪನ್ಯಾಸಕಿ ರೇಷ್ಮಾ, ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು.
ಇತಿಹಾಸ ಉಪನ್ಯಾಸಕರಾದ ಹರೀಶ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಲಕ್ಷ್ಮಣ್ ಏನೆಕಲ್ ಅವರು ವಂದಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಅತಿಥಿಗಳೊಡನೆ ಸಂವಾದ ನಡೆಸಿದರು.
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…