ಸುಳ್ಯ: ಸುಳ್ಯ ತಾಲೂಕಿನ ಹಿರಿಯ ಸಹಕಾರಿ, ಸಾಮಾಜಿಕ ರಾಜಕೀಯ ಧುರೀಣ ಜಾಕೆ ಮಾಧವ ಗೌಡರಿಗೆ 70 ಸಂವತ್ಸರಗಳು ತುಂಬಿದ ಹಿನ್ನಲೆಯಲ್ಲಿ ಅವರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನ.16 ರಂದು ಪಂಜದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಳ್ಯ ಭಾಗದ ಅಭಿಮಾನಿಗಳು ಪೂರ್ತಿಯಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಲು, ಸುಳ್ಯ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಆಮಂತ್ರಣ ಪತ್ರ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಭಿನಂದನಾ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕೋಶಾಧಿಕಾರಿ ಸುರೇಶ್ಕುಮಾರ್ ನಡ್ಕ, ಸುಳ್ಯ ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಎಂ.ಮೀನಾಕ್ಷಿ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಮುಖ
ನವೆಂಬರ್ 16 ರಂದು ಸಂಜೆ ಪಂಜ ಸೊಸೈಟಿ ಬಳಿಯಿಂದ ಮೆರವಣಿಗೆ ನಡೆಯಲಿದೆ. ಬಳಿಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಸಭಾಭವನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಗುವುದು. ಸಮಾರಂಭದಲ್ಲಿ ಜಯಪ್ರಕಾಶ್ ಹೆಗ್ಡೆ, ಡಾ. ಮೋಹನ್ ಆಳ್ವ, ಡಾ.ಎಂ.ಎನ್.ರಾಜೇಂದ್ರಕುಮಾರ್, ಡಾ.ಪುರುಷೋತ್ತಮ ಬಿಳಿಮಲೆ, ಶಾಸಕ ಎಸ್.ಅಂಗಾರ, ಡಾ.ಕೆ.ವಿ.ಚಿದಾನಂದ ಮೊದಲಾದ ಗಣ್ಯರನ್ನು ಆಹ್ವಾನಿಸಲಾಗುತ್ತದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…