ಸುಳ್ಯ: ಸುಳ್ಯ ತಾಲೂಕಿನ ಹಿರಿಯ ಸಹಕಾರಿ, ಸಾಮಾಜಿಕ ರಾಜಕೀಯ ಧುರೀಣ ಜಾಕೆ ಮಾಧವ ಗೌಡರಿಗೆ 70 ಸಂವತ್ಸರಗಳು ತುಂಬಿದ ಹಿನ್ನಲೆಯಲ್ಲಿ ಅವರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನ.16 ರಂದು ಪಂಜದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಳ್ಯ ಭಾಗದ ಅಭಿಮಾನಿಗಳು ಪೂರ್ತಿಯಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಲು, ಸುಳ್ಯ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಆಮಂತ್ರಣ ಪತ್ರ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಭಿನಂದನಾ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ಕೋಶಾಧಿಕಾರಿ ಸುರೇಶ್ಕುಮಾರ್ ನಡ್ಕ, ಸುಳ್ಯ ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಎಂ.ಮೀನಾಕ್ಷಿ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಮುಖ
ನವೆಂಬರ್ 16 ರಂದು ಸಂಜೆ ಪಂಜ ಸೊಸೈಟಿ ಬಳಿಯಿಂದ ಮೆರವಣಿಗೆ ನಡೆಯಲಿದೆ. ಬಳಿಕ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಸಭಾಭವನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಗುವುದು. ಸಮಾರಂಭದಲ್ಲಿ ಜಯಪ್ರಕಾಶ್ ಹೆಗ್ಡೆ, ಡಾ. ಮೋಹನ್ ಆಳ್ವ, ಡಾ.ಎಂ.ಎನ್.ರಾಜೇಂದ್ರಕುಮಾರ್, ಡಾ.ಪುರುಷೋತ್ತಮ ಬಿಳಿಮಲೆ, ಶಾಸಕ ಎಸ್.ಅಂಗಾರ, ಡಾ.ಕೆ.ವಿ.ಚಿದಾನಂದ ಮೊದಲಾದ ಗಣ್ಯರನ್ನು ಆಹ್ವಾನಿಸಲಾಗುತ್ತದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…