ಸುದ್ದಿಗಳು

ಜಾಲ್ಸೂರು : ಪಯಸ್ವಿನಿ ಪ್ರೌಢಶಾಲಾ ಪಯಸ್ವಿನಿ ರಂಗಮಂದಿರ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಜಾಲ್ಸೂರಿನ ಪಯಸ್ವಿನಿ ಅನುದಾನಿತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಯಸ್ವಿನಿ ರಂಗಮಂದಿರವನ್ನು ಸುಳ್ಯ ಶಾಸಕ ಎಸ್. ಅಂಗಾರ ಉದ್ಘಾಟಿಸಿದರು. ದೇಶದಲ್ಲಿ ಏಕಶಿಕ್ಷಣ ನೀತಿ ಜಾರಿಗೆ ಯಾಗಬೇಕು. ಇದರಿಂದ ಸಮಾನತೆಯ ಶಿಕ್ಷಣ ಕಟ್ಟಕಡೆಯ ವ್ಯಕ್ತಿಗೂ ದೊರೆಯುತ್ತದೆ. ಅಲ್ಲದೆ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣದ ಕಡೆಯೂ ಗಮನ ಹರಿಸುವ ಕೆಲಸ ಸರಕಾರ ಮಟ್ಟದಲ್ಲಿ ಆಗಬೇಕು ಎಂದರು.

Advertisement
Advertisement

ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ, ಉಪಾಧ್ಯಕ್ಷ ಇಬ್ರಾಹಿಂ ಕತ್ತರ್, ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಗ್ರಾ.ಪಂ. ಸದಸ್ಯರುಗಳಾದ ಜನಾರ್ದನ ಆಚಾರ್ಯ, ರುಕ್ಮಿಣಿ ನಾರಾಯಣ ಗೌಡ ಕದಿಕಡ್ಕ, ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ವೇದಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಡಳಿತ ಮಂಡಳಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ಸ್ವಾಗತಿಸಿ, ಪ್ರೌಢಶಾಲಾ ಆಡಳಿತ ಮಂಡಳಿ ನಿರ್ದೇಶಕರಾದ ಜಯರಾಮ ರೈ ಜಾಲ್ಸೂರು ಹಾಗೂ ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ಶ್ಯಾಮ್ ಕುಮಾರ್ ಮರಸಂಕ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಂಚಾಲಕ ಜಾಕೆ ಸದಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾಲ್ಸೂರು ಗ್ರಾ.ಪಂ.ವತಿಯಿಂದ ನಿರ್ಮಾಣವಾದ ಶಾಲಾ ಕಾಂಕ್ರಿಟ್ ರಸ್ತೆ ಮತ್ತು ಶಾಲಾ ಆಡಳಿತ ಮಂಡಳಿ ಖಜಾಂಜಿ ಶ್ರೀನಿವಾಸ ಭಟ್ ಅವರು ಕೊಡುಗೆಯಾಗಿ ನೀಡಿದ್ದ ಗೇಟ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಂಕ್ರೀಟ್ ರಸ್ತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್ ಉದ್ಘಾಟಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

5 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

13 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

19 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago