ಸುಳ್ಯ: ಜಾಲ್ಸೂರಿನ ಪಯಸ್ವಿನಿ ಅನುದಾನಿತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಯಸ್ವಿನಿ ರಂಗಮಂದಿರವನ್ನು ಸುಳ್ಯ ಶಾಸಕ ಎಸ್. ಅಂಗಾರ ಉದ್ಘಾಟಿಸಿದರು. ದೇಶದಲ್ಲಿ ಏಕಶಿಕ್ಷಣ ನೀತಿ ಜಾರಿಗೆ ಯಾಗಬೇಕು. ಇದರಿಂದ ಸಮಾನತೆಯ ಶಿಕ್ಷಣ ಕಟ್ಟಕಡೆಯ ವ್ಯಕ್ತಿಗೂ ದೊರೆಯುತ್ತದೆ. ಅಲ್ಲದೆ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣದ ಕಡೆಯೂ ಗಮನ ಹರಿಸುವ ಕೆಲಸ ಸರಕಾರ ಮಟ್ಟದಲ್ಲಿ ಆಗಬೇಕು ಎಂದರು.
ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ, ಉಪಾಧ್ಯಕ್ಷ ಇಬ್ರಾಹಿಂ ಕತ್ತರ್, ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಗ್ರಾ.ಪಂ. ಸದಸ್ಯರುಗಳಾದ ಜನಾರ್ದನ ಆಚಾರ್ಯ, ರುಕ್ಮಿಣಿ ನಾರಾಯಣ ಗೌಡ ಕದಿಕಡ್ಕ, ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ವೇದಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ಸ್ವಾಗತಿಸಿ, ಪ್ರೌಢಶಾಲಾ ಆಡಳಿತ ಮಂಡಳಿ ನಿರ್ದೇಶಕರಾದ ಜಯರಾಮ ರೈ ಜಾಲ್ಸೂರು ಹಾಗೂ ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ಶ್ಯಾಮ್ ಕುಮಾರ್ ಮರಸಂಕ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಂಚಾಲಕ ಜಾಕೆ ಸದಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾಲ್ಸೂರು ಗ್ರಾ.ಪಂ.ವತಿಯಿಂದ ನಿರ್ಮಾಣವಾದ ಶಾಲಾ ಕಾಂಕ್ರಿಟ್ ರಸ್ತೆ ಮತ್ತು ಶಾಲಾ ಆಡಳಿತ ಮಂಡಳಿ ಖಜಾಂಜಿ ಶ್ರೀನಿವಾಸ ಭಟ್ ಅವರು ಕೊಡುಗೆಯಾಗಿ ನೀಡಿದ್ದ ಗೇಟ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಂಕ್ರೀಟ್ ರಸ್ತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್ ಉದ್ಘಾಟಿಸಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…