Advertisement
ಸುದ್ದಿಗಳು

ಜಾಲ್ಸೂರು : ಪಯಸ್ವಿನಿ ಪ್ರೌಢಶಾಲಾ ಪಯಸ್ವಿನಿ ರಂಗಮಂದಿರ ಉದ್ಘಾಟನೆ

Share

ಸುಳ್ಯ: ಜಾಲ್ಸೂರಿನ ಪಯಸ್ವಿನಿ ಅನುದಾನಿತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಯಸ್ವಿನಿ ರಂಗಮಂದಿರವನ್ನು ಸುಳ್ಯ ಶಾಸಕ ಎಸ್. ಅಂಗಾರ ಉದ್ಘಾಟಿಸಿದರು. ದೇಶದಲ್ಲಿ ಏಕಶಿಕ್ಷಣ ನೀತಿ ಜಾರಿಗೆ ಯಾಗಬೇಕು. ಇದರಿಂದ ಸಮಾನತೆಯ ಶಿಕ್ಷಣ ಕಟ್ಟಕಡೆಯ ವ್ಯಕ್ತಿಗೂ ದೊರೆಯುತ್ತದೆ. ಅಲ್ಲದೆ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣದ ಕಡೆಯೂ ಗಮನ ಹರಿಸುವ ಕೆಲಸ ಸರಕಾರ ಮಟ್ಟದಲ್ಲಿ ಆಗಬೇಕು ಎಂದರು.

ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ, ಉಪಾಧ್ಯಕ್ಷ ಇಬ್ರಾಹಿಂ ಕತ್ತರ್, ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಗ್ರಾ.ಪಂ. ಸದಸ್ಯರುಗಳಾದ ಜನಾರ್ದನ ಆಚಾರ್ಯ, ರುಕ್ಮಿಣಿ ನಾರಾಯಣ ಗೌಡ ಕದಿಕಡ್ಕ, ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ವೇದಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಡಳಿತ ಮಂಡಳಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ಸ್ವಾಗತಿಸಿ, ಪ್ರೌಢಶಾಲಾ ಆಡಳಿತ ಮಂಡಳಿ ನಿರ್ದೇಶಕರಾದ ಜಯರಾಮ ರೈ ಜಾಲ್ಸೂರು ಹಾಗೂ ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ಶ್ಯಾಮ್ ಕುಮಾರ್ ಮರಸಂಕ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಂಚಾಲಕ ಜಾಕೆ ಸದಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾಲ್ಸೂರು ಗ್ರಾ.ಪಂ.ವತಿಯಿಂದ ನಿರ್ಮಾಣವಾದ ಶಾಲಾ ಕಾಂಕ್ರಿಟ್ ರಸ್ತೆ ಮತ್ತು ಶಾಲಾ ಆಡಳಿತ ಮಂಡಳಿ ಖಜಾಂಜಿ ಶ್ರೀನಿವಾಸ ಭಟ್ ಅವರು ಕೊಡುಗೆಯಾಗಿ ನೀಡಿದ್ದ ಗೇಟ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಂಕ್ರೀಟ್ ರಸ್ತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್ ಉದ್ಘಾಟಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

6 minutes ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

19 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago