ಸುಳ್ಯ: ಜಾಲ್ಸೂರಿನ ಪಯಸ್ವಿನಿ ಅನುದಾನಿತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಯಸ್ವಿನಿ ರಂಗಮಂದಿರವನ್ನು ಸುಳ್ಯ ಶಾಸಕ ಎಸ್. ಅಂಗಾರ ಉದ್ಘಾಟಿಸಿದರು. ದೇಶದಲ್ಲಿ ಏಕಶಿಕ್ಷಣ ನೀತಿ ಜಾರಿಗೆ ಯಾಗಬೇಕು. ಇದರಿಂದ ಸಮಾನತೆಯ ಶಿಕ್ಷಣ ಕಟ್ಟಕಡೆಯ ವ್ಯಕ್ತಿಗೂ ದೊರೆಯುತ್ತದೆ. ಅಲ್ಲದೆ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣದ ಕಡೆಯೂ ಗಮನ ಹರಿಸುವ ಕೆಲಸ ಸರಕಾರ ಮಟ್ಟದಲ್ಲಿ ಆಗಬೇಕು ಎಂದರು.
ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ, ಉಪಾಧ್ಯಕ್ಷ ಇಬ್ರಾಹಿಂ ಕತ್ತರ್, ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಗ್ರಾ.ಪಂ. ಸದಸ್ಯರುಗಳಾದ ಜನಾರ್ದನ ಆಚಾರ್ಯ, ರುಕ್ಮಿಣಿ ನಾರಾಯಣ ಗೌಡ ಕದಿಕಡ್ಕ, ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ವೇದಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ಸ್ವಾಗತಿಸಿ, ಪ್ರೌಢಶಾಲಾ ಆಡಳಿತ ಮಂಡಳಿ ನಿರ್ದೇಶಕರಾದ ಜಯರಾಮ ರೈ ಜಾಲ್ಸೂರು ಹಾಗೂ ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ಶ್ಯಾಮ್ ಕುಮಾರ್ ಮರಸಂಕ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಂಚಾಲಕ ಜಾಕೆ ಸದಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾಲ್ಸೂರು ಗ್ರಾ.ಪಂ.ವತಿಯಿಂದ ನಿರ್ಮಾಣವಾದ ಶಾಲಾ ಕಾಂಕ್ರಿಟ್ ರಸ್ತೆ ಮತ್ತು ಶಾಲಾ ಆಡಳಿತ ಮಂಡಳಿ ಖಜಾಂಜಿ ಶ್ರೀನಿವಾಸ ಭಟ್ ಅವರು ಕೊಡುಗೆಯಾಗಿ ನೀಡಿದ್ದ ಗೇಟ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಂಕ್ರೀಟ್ ರಸ್ತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್ ಉದ್ಘಾಟಿಸಿದರು.
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…