ಜಿಲ್ಲಾಧಿಕಾರಿಗಳಿಂದ ಮನವಿ | ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಮುಕ್ತವಾಗಿ ಹೇಳಿ, ಭಯ ಬೇಡ | ನಿಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಕೈಜೋಡಿಸಿ |

April 19, 2020
10:40 PM

ಮಂಗಳೂರು: ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫಿವರ್ ಕ್ಲಿನಿಕ್ ಗೆ ಸಾರ್ವಜನಿಕರು ಸಂಪರ್ಕಿಸಿ. ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಮುಕ್ತವಾಗಿ ಹಂಚಿಕೊಳ್ಳಿ. ಯಾವುದೇ ಭಯ, ಆತಂಕ ಬೇಡ. ಇದು ನಿಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಎಂದು ಜಿಲ್ಲಾದಿಕಾರಿ ಸಿಂಧೂ ಬಿ ರೂಪೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಯಾರೇ ಆಗಲು  ತಾವು ವಿದೇಶ ಪ್ರಯಾಣ ಮಾಡಿದ್ದಲ್ಲಿ ಅಥವಾ ತಮಗೆ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫಿವರ್ ಕ್ಲಿನಿಕ್ ಸಂಪರ್ಕಿಸಲು ಕೋರಲಾಗಿರುತ್ತದೆ. ಕೋವಿಡ್ ಪರೀಕ್ಷೆಗೊಳಪಡಿಸುವ ಅಥವಾ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ  ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ. ಖಾಸಗೀ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿ ನೀಡಲು ಕೋರಲಾಗಿರುತ್ತದೆ. ಆದಾಗ್ಯೂ ಸಹ, ಕೆಲವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದಂತೆ ಕಂಡುಬರುವುದಿಲ್ಲ.

ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ.  ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವ ಮಾಹಿತಿಯನ್ನು ನೀಡುವುದು ಸೂಕ್ತವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ, ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ವಿನಂತಿಸುತ್ತೇವೆ ಎಂದು ಜಿಲ್ಲಾದಿಕಾರಿಗಳು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror