Advertisement
ಸುದ್ದಿಗಳು

ಜಿಲ್ಲಾಧಿಕಾರಿಗಳಿಂದ ಮನವಿ | ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಮುಕ್ತವಾಗಿ ಹೇಳಿ, ಭಯ ಬೇಡ | ನಿಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಕೈಜೋಡಿಸಿ |

Share

ಮಂಗಳೂರು: ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫಿವರ್ ಕ್ಲಿನಿಕ್ ಗೆ ಸಾರ್ವಜನಿಕರು ಸಂಪರ್ಕಿಸಿ. ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಮುಕ್ತವಾಗಿ ಹಂಚಿಕೊಳ್ಳಿ. ಯಾವುದೇ ಭಯ, ಆತಂಕ ಬೇಡ. ಇದು ನಿಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಎಂದು ಜಿಲ್ಲಾದಿಕಾರಿ ಸಿಂಧೂ ಬಿ ರೂಪೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಯಾರೇ ಆಗಲು  ತಾವು ವಿದೇಶ ಪ್ರಯಾಣ ಮಾಡಿದ್ದಲ್ಲಿ ಅಥವಾ ತಮಗೆ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫಿವರ್ ಕ್ಲಿನಿಕ್ ಸಂಪರ್ಕಿಸಲು ಕೋರಲಾಗಿರುತ್ತದೆ. ಕೋವಿಡ್ ಪರೀಕ್ಷೆಗೊಳಪಡಿಸುವ ಅಥವಾ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ  ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ. ಖಾಸಗೀ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿ ನೀಡಲು ಕೋರಲಾಗಿರುತ್ತದೆ. ಆದಾಗ್ಯೂ ಸಹ, ಕೆಲವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದಂತೆ ಕಂಡುಬರುವುದಿಲ್ಲ.

ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ.  ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವ ಮಾಹಿತಿಯನ್ನು ನೀಡುವುದು ಸೂಕ್ತವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ, ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ವಿನಂತಿಸುತ್ತೇವೆ ಎಂದು ಜಿಲ್ಲಾದಿಕಾರಿಗಳು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

9 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

16 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

16 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

1 day ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

2 days ago