ಮಂಗಳೂರು: ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫಿವರ್ ಕ್ಲಿನಿಕ್ ಗೆ ಸಾರ್ವಜನಿಕರು ಸಂಪರ್ಕಿಸಿ. ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಮುಕ್ತವಾಗಿ ಹಂಚಿಕೊಳ್ಳಿ. ಯಾವುದೇ ಭಯ, ಆತಂಕ ಬೇಡ. ಇದು ನಿಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಎಂದು ಜಿಲ್ಲಾದಿಕಾರಿ ಸಿಂಧೂ ಬಿ ರೂಪೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಯಾರೇ ಆಗಲು ತಾವು ವಿದೇಶ ಪ್ರಯಾಣ ಮಾಡಿದ್ದಲ್ಲಿ ಅಥವಾ ತಮಗೆ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫಿವರ್ ಕ್ಲಿನಿಕ್ ಸಂಪರ್ಕಿಸಲು ಕೋರಲಾಗಿರುತ್ತದೆ. ಕೋವಿಡ್ ಪರೀಕ್ಷೆಗೊಳಪಡಿಸುವ ಅಥವಾ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ. ಖಾಸಗೀ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿ ನೀಡಲು ಕೋರಲಾಗಿರುತ್ತದೆ. ಆದಾಗ್ಯೂ ಸಹ, ಕೆಲವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದಂತೆ ಕಂಡುಬರುವುದಿಲ್ಲ.
ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವ ಮಾಹಿತಿಯನ್ನು ನೀಡುವುದು ಸೂಕ್ತವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ, ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ವಿನಂತಿಸುತ್ತೇವೆ ಎಂದು ಜಿಲ್ಲಾದಿಕಾರಿಗಳು ಮನವಿ ಮಾಡಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…