Advertisement
ಕಲೆ-ಸಂಸ್ಕೃತಿ

ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ : ಮೊಬೈಲ್‌ನಲ್ಲಿ ಕಾಲಹರಣ ಮಾಡಬೇಡಿ : ಮಕ್ಕಳ ಅಭಿವೃದ್ಧಿ ಇಲಾಖೆ ಡಿಡಿ ರಾಧಾ ಸಲಹೆ

Share

ಮಡಿಕೇರಿ: ಜಿಲ್ಲಾ ಬಾಲಭವನ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ‘’ಕಲಾಶ್ರೀ’’ ಆಯ್ಕೆ ಶಿಬಿರವು ಮಂಗಳವಾರ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ರಾಧ ಅವರು ಮಾತನಾಡಿ ಪ್ರತಿಭೆ ಹೊರ ಸೂಸುವಂತಹ ಕಾರ್ಯಕ್ರಮ. ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬಾಲ ಭವನ ಸೊಸೈಟಿಯು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿದೆ ಎಂದರು.  ಮಕ್ಕಳು ಹೆಚ್ಚಿನ ದೈಹಿಕ ಶ್ರಮವಿಲ್ಲದೆ ಸಮಯವನ್ನು ಟಿ.ವಿ, ಮೊಬೈಲ್, ಹಾಗೂ ಕಂಪ್ಯೂಟರ್‌ಗಳನ್ನು ಉಪಯೋಗಿಸುತ್ತ ವ್ಯರ್ಥ ಮಾಡುತ್ತಿದ್ದಾರೆ. ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಅಂಕವನ್ನು ತೆಗೆಯಲು ಒತ್ತಡವನ್ನು ಹೇರುವುದರಿಂದ ಖಿನ್ನತೆಗೆ ಒಳಗಾಗುತ್ತಾರೆ. ಅಂಕಗಳನ್ನು ಮಾತ್ರ ಪರಿಗಣಿಸದೆ ಅವರ ಪ್ರತಿಭೆಯನ್ನು ಪೋಷಿಸಿ ಬೆಳೆಸಬೇಕು. ಬಾಲಕಾರ್ಮಿಕ ಮಕ್ಕಳು, ಅನಾಥ ಮಕ್ಕಳು, ಏಕ ಪೋಷಕ ಮಕ್ಕಳು, ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಶೋಷಣೆಗೆ ಒಳಗಾದಂತಹ ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಅವರು ಹೇಳಿದರು.

ಸೃಜನಾತ್ಮಕ ಕಲೆ, ಚಿತ್ರಕಲೆ, ಕರಕುಶಲ ಕಲೆ, ಜೇಡಿ ಮಣ್ಣಿನ ಕಲೆ, ಶೃಜನತ್ಮಾಕ ಬರವಣಿಗೆ, ಕಥೆ- ಕೊಡಗಿನಲ್ಲಾದ ಪ್ರಕೃತಿ ವಿಕೋಪ ನಂತರದ ಚಿತ್ರಣ ಅಥವಾ ಕೊಡಗಿನಲ್ಲಾದ ಪ್ರಕೃತಿ ವಿಕೋಪದ ಚಿತ್ರಣ, ಕವನ, ಕೊಡಗಿನ ವೀರ ಯೋಧ, ಪ್ರಬಂಧ – ಸೃಜನಾತ್ಮಕ ಕಲೆ ಬೆಳೆಸುವುದರಲ್ಲಿ ವಿದ್ಯಾರ್ಥಿಗಳ ಪಾತ್ರ, ಸೃಜನತ್ಮಾಕ ಪ್ರದರ್ಶನ ಕಲೆ, ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಶಾಸ್ತ್ರೀಯ ಗಾಯನ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷ ಪ್ರದರ್ಶನ, ಸುಗಮ ಸಂಗೀತ, ಯೋಗ, ನೃತ್ಯ, ಏಕ ಪಾತ್ರಾಭಿನಯ, ವಿಜ್ಞಾನದಲ್ಲಿ ನೂತನ ಆವಿಷ್ಕಾರಗಳನ್ನು ಕಾರ್ಯಕ್ರಮ ಒಳಗೊಂಡಿತ್ತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಮಂಜುಳ ಮತ್ತು ಕೋಮಲ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ಜಿಲ್ಲಾ ಸಂಯೋಜಕರಾದ ಪ್ರಭಾವತಿ, ತೀರ್ಪುಗಾರರಾದ ಪ್ರಸನ್ನ, ಭರತ್ ಕೋಡಿ, ದಿಲೀಪ್ ಕುಮಾರ್, ಭಾರತಿ ರಮೇಶ್, ಗೌರಮ್ಮ ಮತ್ತು ಇತರರು ಪಾಲ್ಗೊಂಡಿದ್ದರು.

ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ 2019ರಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿ ಶಿಬಿರಕ್ಕೆ ಆಯ್ಕೆಯಾದ ಮಕ್ಕಳ ವಿವರ ಇಂತಿದೆ. ಸೃಜನಾತ್ಮಕ ಕಲೆಯಲ್ಲಿ ಮಡಿಕೇರಿ ಸಂತ ಜೋಸೆಫರ ಶಾಲೆಯ ಮಿಥಿಲ ಟಿ.ಎಂ., ಹಾಗೂ ಕೊಡಗು ವಿದ್ಯಾಲಯ, ಭಾರತೀಯ ವಿದ್ಯಾಭವನದ ಲಕ್ಷ್ಯ ಪಿ. ಎನ್., ಸೃಜನಾತ್ಮಕ ಬರವಣಿಗೆಯಲ್ಲಿ ಮಡಿಕೇರಿ ಸಂತ ಜೋಸೆಫರ ಪ್ರೌಢಶಾಲೆಯ ಅನನ್ಯ ಎಂ.ಹೆಚ್. ಹಾಗೂ ಸೋಮವಾರಪೇಟೆ ಸಂತ ಜೋಸೆಫರ ಪ್ರೌಢಶಾಲೆಯ ದರ್ಶನ್ ಬಿ. ಎಂ., ವಿಜ್ಞಾನದಲ್ಲಿ ನೂತನ ಆವಿಷ್ಕಾರದಲ್ಲಿ ಜನರಲ್ ತಿಮ್ಮಯ್ಯ ಶಾಲೆಯ ಶ್ರೀದೇವಿ, ಪೊನ್ನಂಪೇಟೆ ಸಂತ ಅಂತೋಣಿ ಶಾಲೆಯ ಲಿಖಿತ್., ಸೃಜನಾತ್ಮಕ ಕಲೆ ಮತ್ತು ಪ್ರದರ್ಶನದಲ್ಲಿ ಗೋಣಿಕೊಪ್ಪ ಕೂರ್ಗ್ ಪಬ್ಲಿಕ್ ಶಾಲೆಯ ಆಯುಷ್ ಎಂ. ಡಿ., ಮಡಿಕೇರಿ ಸಂತ ಜೋಸೆಫರ್ ಶಾಲೆಯ ಮೇನಿತಾ ನಾಗೇಶ್ ಅವರು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

4 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

4 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

4 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

5 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

17 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago