Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಜನಪದ ಕ್ರೀಡಾಕೂಟ ಸಮಾರೋಪ

Share

ಸವಣೂರು : ಪಾಲ್ತಾಡಿಯ ಚೆನ್ನಾವರ ಅಭ್ಯುದಯ ಯುವಕ ಮಂಡಲದ ವತಿಯಿಂದ ಆಟಿದ ಕೂಟದ ಅಂಗವಾಗಿ ನಡೆದ 3 ನೇ ವರ್ಷದ ಜಿಲ್ಲಾ ಮಟ್ಟದ ಜನಪದ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಹಿಸಿದ್ದರು.ಸಾಮಾಜಿಕ ಮುಂದಾಳು ಸುಬ್ರಾಯ ಗೌಡ ಮಾಡಾವು ಬಹುಮಾನ ವಿತರಿಸಿದರು.
ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದಯಾನಂದ ಮಾಲೆತ್ತಾರು ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಉದಯ ಬಿ.ಆರ್,ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಕಾರ್ಯಾಧ್ಯಕ್ಷ ಸುನೀಲ್ ರೈ ಪಾಲ್ತಾಡು, ಪಾಲ್ತಾಡು ನ್ಯೂಬ್ರದರ್ಸ್‍ನ ಅಧ್ಯಕ್ಷ ಹನೀಫ್,ಪಾದೆಬಂಬಿಲ ಶ್ರೀ ದುರ್ಗಾ ಭಜನ ಮಂಡಳಿಯ ಅಧ್ಯಕ್ಷ ಹೊನ್ನಪ್ಪ ಗೌಡ ಜಾರಿಗೆತ್ತಡಿ ಅತಿಥಿಗಳಾಗಿದ್ದರು.
ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡಿದರು.ಸಾಮಾಜಿಕ ಮುಂದಾಳು ಬಾಲಕೃಷ್ಣ ರೈ ಚೆನ್ನಾವರ,ಹಿರಿಯ ಕೃಷಿಕ ನಾರಾಯಣ ರೈ ಪಟ್ಟೆ,ಚೆನ್ನಾವರ ಶಾಲಾ ಮುಖ್ಯ ಗುರು ಶಾಂತಾಕುಮಾರಿ ಎನ್,ಸವಣೂರು ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ,ವಿಶ್ವನಾಥ ರೈ ಚೆನ್ನಾವರ ಪಟ್ಟೆ ಉಪಸ್ಥಿತರಿದ್ದರು.

ಫಲಿತಾಂಶ

ಕೆಸರುಗದ್ದೆ ಜನಪದ ಕ್ರೀಡಾಕೂಟದಲ್ಲಿ ಪುರುಷರಿಗೆ ನಡೆಯುವ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ವಿನಾಯಕ ಕುಂಬ್ರ ಎ ,ದ್ವಿತೀಯ ವಿನಾಯಕ ಕುಂಬ್ರ ಬಿ ,ತೃತೀಯ ಶ್ರೀದೇವಿ ಶರವೂರು ಹಾಗೂ ಚತುರ್ಥ ಸಹಸ್ರ ನೆಲ್ಯಾಡಿ .

ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಶಿಬಾರ ಫ್ರೆಂಡ್ಸ್ ಮಂಗಳೂರು ,ದ್ವಿತೀಯ ಕೆಎ 21 ಆಲಂಕಾರು, ತೃತೀಯ ಎನ್.ಎಂ.ಸಿ ಸುಳ್ಯ ಹಾಗೂ ಚತುರ್ಥ ಎಸ್.ಡಿ.ಎಂ ಉಜಿರೆ.

ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ.ಪ್ರಥಮ ದರ್ಜೆ ಕಾಲೇಜು ಸುಳ್ಯ ,ದ್ವಿತೀಯ -ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ.

ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟದಲ್ಲಿ ಪ್ರಥಮ ಸರ್ವೆ ಮಹಿಳಾ ಮಂಡಲ,ದ್ವಿತೀಯ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು.

ಪುರುಷರ ವಿಭಾಗದಲ್ಲಿ ಸವಣೂರು ವಿದ್ಯಾರಶ್ಮಿಯ ಸಂಪತ್ ಶೆಟ್ಟಿ ಬಾರಿಕೆ ಹಾಗೂ ಸುಳ್ಯ ಪ್ರಥಮ ದರ್ಜೆ ಕಾಲೇಜಿನ ಅಶ್ವಿನಿ ಅವರು ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದರು.

ಉಳಿದಂತೆ ಕೆಸರುಗದ್ದೆ ಓಟ ,ತುಳು ಜಾನಪದ ಸ್ಪರ್ದೆ ,ತುಳು ಪಾಡ್ದನ ಸ್ಪರ್ಧೆ , ತುಳು ರಸಪ್ರಶ್ನೆ ,ತುಳು ಭಾಷಣ ,ಜಾನಪದ ಸ್ಪರ್ಧೆ ,ನಿಧಿ ಶೋಧ ಸೇರಿದಂತೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

5 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

6 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

7 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

8 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

21 hours ago