Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಜನಪದ ಕ್ರೀಡಾಕೂಟ ಸಮಾರೋಪ

Share

ಸವಣೂರು : ಪಾಲ್ತಾಡಿಯ ಚೆನ್ನಾವರ ಅಭ್ಯುದಯ ಯುವಕ ಮಂಡಲದ ವತಿಯಿಂದ ಆಟಿದ ಕೂಟದ ಅಂಗವಾಗಿ ನಡೆದ 3 ನೇ ವರ್ಷದ ಜಿಲ್ಲಾ ಮಟ್ಟದ ಜನಪದ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಹಿಸಿದ್ದರು.ಸಾಮಾಜಿಕ ಮುಂದಾಳು ಸುಬ್ರಾಯ ಗೌಡ ಮಾಡಾವು ಬಹುಮಾನ ವಿತರಿಸಿದರು.
ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದಯಾನಂದ ಮಾಲೆತ್ತಾರು ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಉದಯ ಬಿ.ಆರ್,ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಕಾರ್ಯಾಧ್ಯಕ್ಷ ಸುನೀಲ್ ರೈ ಪಾಲ್ತಾಡು, ಪಾಲ್ತಾಡು ನ್ಯೂಬ್ರದರ್ಸ್‍ನ ಅಧ್ಯಕ್ಷ ಹನೀಫ್,ಪಾದೆಬಂಬಿಲ ಶ್ರೀ ದುರ್ಗಾ ಭಜನ ಮಂಡಳಿಯ ಅಧ್ಯಕ್ಷ ಹೊನ್ನಪ್ಪ ಗೌಡ ಜಾರಿಗೆತ್ತಡಿ ಅತಿಥಿಗಳಾಗಿದ್ದರು.
ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡಿದರು.ಸಾಮಾಜಿಕ ಮುಂದಾಳು ಬಾಲಕೃಷ್ಣ ರೈ ಚೆನ್ನಾವರ,ಹಿರಿಯ ಕೃಷಿಕ ನಾರಾಯಣ ರೈ ಪಟ್ಟೆ,ಚೆನ್ನಾವರ ಶಾಲಾ ಮುಖ್ಯ ಗುರು ಶಾಂತಾಕುಮಾರಿ ಎನ್,ಸವಣೂರು ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ,ವಿಶ್ವನಾಥ ರೈ ಚೆನ್ನಾವರ ಪಟ್ಟೆ ಉಪಸ್ಥಿತರಿದ್ದರು.

Advertisement
Advertisement

ಫಲಿತಾಂಶ

ಕೆಸರುಗದ್ದೆ ಜನಪದ ಕ್ರೀಡಾಕೂಟದಲ್ಲಿ ಪುರುಷರಿಗೆ ನಡೆಯುವ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ವಿನಾಯಕ ಕುಂಬ್ರ ಎ ,ದ್ವಿತೀಯ ವಿನಾಯಕ ಕುಂಬ್ರ ಬಿ ,ತೃತೀಯ ಶ್ರೀದೇವಿ ಶರವೂರು ಹಾಗೂ ಚತುರ್ಥ ಸಹಸ್ರ ನೆಲ್ಯಾಡಿ .

ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಶಿಬಾರ ಫ್ರೆಂಡ್ಸ್ ಮಂಗಳೂರು ,ದ್ವಿತೀಯ ಕೆಎ 21 ಆಲಂಕಾರು, ತೃತೀಯ ಎನ್.ಎಂ.ಸಿ ಸುಳ್ಯ ಹಾಗೂ ಚತುರ್ಥ ಎಸ್.ಡಿ.ಎಂ ಉಜಿರೆ.

ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ.ಪ್ರಥಮ ದರ್ಜೆ ಕಾಲೇಜು ಸುಳ್ಯ ,ದ್ವಿತೀಯ -ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ.

ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟದಲ್ಲಿ ಪ್ರಥಮ ಸರ್ವೆ ಮಹಿಳಾ ಮಂಡಲ,ದ್ವಿತೀಯ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು.

ಪುರುಷರ ವಿಭಾಗದಲ್ಲಿ ಸವಣೂರು ವಿದ್ಯಾರಶ್ಮಿಯ ಸಂಪತ್ ಶೆಟ್ಟಿ ಬಾರಿಕೆ ಹಾಗೂ ಸುಳ್ಯ ಪ್ರಥಮ ದರ್ಜೆ ಕಾಲೇಜಿನ ಅಶ್ವಿನಿ ಅವರು ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದರು.

ಉಳಿದಂತೆ ಕೆಸರುಗದ್ದೆ ಓಟ ,ತುಳು ಜಾನಪದ ಸ್ಪರ್ದೆ ,ತುಳು ಪಾಡ್ದನ ಸ್ಪರ್ಧೆ , ತುಳು ರಸಪ್ರಶ್ನೆ ,ತುಳು ಭಾಷಣ ,ಜಾನಪದ ಸ್ಪರ್ಧೆ ,ನಿಧಿ ಶೋಧ ಸೇರಿದಂತೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

8 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

8 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

8 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

8 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

8 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

9 hours ago