Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಜನಪದ ಕ್ರೀಡಾಕೂಟ ಸಮಾರೋಪ

Share

ಸವಣೂರು : ಪಾಲ್ತಾಡಿಯ ಚೆನ್ನಾವರ ಅಭ್ಯುದಯ ಯುವಕ ಮಂಡಲದ ವತಿಯಿಂದ ಆಟಿದ ಕೂಟದ ಅಂಗವಾಗಿ ನಡೆದ 3 ನೇ ವರ್ಷದ ಜಿಲ್ಲಾ ಮಟ್ಟದ ಜನಪದ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಹಿಸಿದ್ದರು.ಸಾಮಾಜಿಕ ಮುಂದಾಳು ಸುಬ್ರಾಯ ಗೌಡ ಮಾಡಾವು ಬಹುಮಾನ ವಿತರಿಸಿದರು.
ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದಯಾನಂದ ಮಾಲೆತ್ತಾರು ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಉದಯ ಬಿ.ಆರ್,ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಕಾರ್ಯಾಧ್ಯಕ್ಷ ಸುನೀಲ್ ರೈ ಪಾಲ್ತಾಡು, ಪಾಲ್ತಾಡು ನ್ಯೂಬ್ರದರ್ಸ್‍ನ ಅಧ್ಯಕ್ಷ ಹನೀಫ್,ಪಾದೆಬಂಬಿಲ ಶ್ರೀ ದುರ್ಗಾ ಭಜನ ಮಂಡಳಿಯ ಅಧ್ಯಕ್ಷ ಹೊನ್ನಪ್ಪ ಗೌಡ ಜಾರಿಗೆತ್ತಡಿ ಅತಿಥಿಗಳಾಗಿದ್ದರು.
ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡಿದರು.ಸಾಮಾಜಿಕ ಮುಂದಾಳು ಬಾಲಕೃಷ್ಣ ರೈ ಚೆನ್ನಾವರ,ಹಿರಿಯ ಕೃಷಿಕ ನಾರಾಯಣ ರೈ ಪಟ್ಟೆ,ಚೆನ್ನಾವರ ಶಾಲಾ ಮುಖ್ಯ ಗುರು ಶಾಂತಾಕುಮಾರಿ ಎನ್,ಸವಣೂರು ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ,ವಿಶ್ವನಾಥ ರೈ ಚೆನ್ನಾವರ ಪಟ್ಟೆ ಉಪಸ್ಥಿತರಿದ್ದರು.

ಫಲಿತಾಂಶ

ಕೆಸರುಗದ್ದೆ ಜನಪದ ಕ್ರೀಡಾಕೂಟದಲ್ಲಿ ಪುರುಷರಿಗೆ ನಡೆಯುವ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ವಿನಾಯಕ ಕುಂಬ್ರ ಎ ,ದ್ವಿತೀಯ ವಿನಾಯಕ ಕುಂಬ್ರ ಬಿ ,ತೃತೀಯ ಶ್ರೀದೇವಿ ಶರವೂರು ಹಾಗೂ ಚತುರ್ಥ ಸಹಸ್ರ ನೆಲ್ಯಾಡಿ .

ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಶಿಬಾರ ಫ್ರೆಂಡ್ಸ್ ಮಂಗಳೂರು ,ದ್ವಿತೀಯ ಕೆಎ 21 ಆಲಂಕಾರು, ತೃತೀಯ ಎನ್.ಎಂ.ಸಿ ಸುಳ್ಯ ಹಾಗೂ ಚತುರ್ಥ ಎಸ್.ಡಿ.ಎಂ ಉಜಿರೆ.

ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ.ಪ್ರಥಮ ದರ್ಜೆ ಕಾಲೇಜು ಸುಳ್ಯ ,ದ್ವಿತೀಯ -ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ.

ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟದಲ್ಲಿ ಪ್ರಥಮ ಸರ್ವೆ ಮಹಿಳಾ ಮಂಡಲ,ದ್ವಿತೀಯ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು.

ಪುರುಷರ ವಿಭಾಗದಲ್ಲಿ ಸವಣೂರು ವಿದ್ಯಾರಶ್ಮಿಯ ಸಂಪತ್ ಶೆಟ್ಟಿ ಬಾರಿಕೆ ಹಾಗೂ ಸುಳ್ಯ ಪ್ರಥಮ ದರ್ಜೆ ಕಾಲೇಜಿನ ಅಶ್ವಿನಿ ಅವರು ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದರು.

ಉಳಿದಂತೆ ಕೆಸರುಗದ್ದೆ ಓಟ ,ತುಳು ಜಾನಪದ ಸ್ಪರ್ದೆ ,ತುಳು ಪಾಡ್ದನ ಸ್ಪರ್ಧೆ , ತುಳು ರಸಪ್ರಶ್ನೆ ,ತುಳು ಭಾಷಣ ,ಜಾನಪದ ಸ್ಪರ್ಧೆ ,ನಿಧಿ ಶೋಧ ಸೇರಿದಂತೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

3 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

9 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

9 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago