ಮಂಗಳೂರು:2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ ಬಳಂಜ, ಬೆಳ್ತಂಗಡಿ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 18 ರಿಂದ 19 ವರೆಗೆ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಂಜ, ಬೆಳ್ತಂಗಡಿ ತಾಲೂಕಿನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಸಲಾಗುವುದು.
ಈ ಯುವಜನ ಮೇಳದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯ ವಿವಿರ ಇಂತಿವೆ: ಭಾವಗೀತೆ (ವೈಯಕ್ತಿಕ) 3 ನಿಮಿಷ, ಲಾವಣಿ (ವೈಯಕ್ತಿಕ) 4 ನಿಮಿಷ, ರಂಗಗೀತೆ (ವೈಯಕ್ತಿಕ) 3 ನಿಮಿಷ, ಏಕಪಾತ್ರಾಭಿನಯ (ವೈಯಕ್ತಿಕ) 5 ನಿಮಿಷ, ತುಳು ಭಾವಗೀತೆ (ವೈಯಕ್ತಿಕ) 3 ನಿಮಿಷ, ಗೀಗೀಪದ 5 ಜನ 4 ನಿಮಿಷ, ಜಾನಪದ ಗೀತೆ 6 ಜನ 4 ನಿಮಿಷ, ಜಾನಪದ ನೃತ್ಯ 12 ಜನ 10 ನಿಮಿಷ, ಕೋಲಾಟ 12 ಜನ 6 ನಿಮಿಷ, ಭಜನೆ 8 ಜನ 07 ನಿಮಿಷ, ತುಳು ಪಾಡ್ದನ 2 ಜನ 03 ನಿಮಿಷ, ತುಳು ಜಾನಪದ ನೃತ್ಯ 10 ಜನ 10 ನಿಮಿಷ, ರಾಗಿ/ಜೋಳ ಬೀಸುವ ಪದ (ಯುವತಿಯರಿಗೆ ಮಾತ್ರ) 2 ಜನ 3 ನಿಮಿಷ, ಸೋಬಾನೆ ಪದ (ಯುವತಿಯರಿಗೆ ಮಾತ್ರ) 4 ಜನ 5 ನಿಮಿಷ, ವೀರಗಾಸೆ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ಡೊಳ್ಳುಕುಣಿತ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ದೊಡ್ಡಟ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಸಣ್ಣಾಟ (ಯುವಕರಿಗೆ ಮಾತ್ರ) 12 ಜನ 30 ನಿಮಿಷ, ಯಕ್ಷಗಾನ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) 6 ಜನ 10 ನಿಮಿಷ.
ಈ ಯುವಜನ ಮೇಳದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾವಣೆಗೊಂಡ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕಿನ ಕ್ರಿಯಾಶೀಲ ಯುವಕ/ಯುವತಿ ಮಂಡಲದ 15 ರಿಂದ 35 ವರ್ಷದೊಳಗಿನ ಸದಸ್ಯರುಗಳು ಭಾಗವಹಿಸಬಹುದಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸುವ ಎಲ್ಲಾ ಯುವಕ/ಯುವತಿಯರು ಜನವರಿ 18 ರಂದು ಬೆಳಿಗ್ಗೆ 9 ಗಂಟೆಗೆಯೊಳಗೆ ಸಂಘಟಕರಲ್ಲಿ ದೂರವಾಣಿ ಸಂಖ್ಯೆ: 9901304348, 7975352686, 9480858238, 8971076439 ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…