ಸುದ್ದಿಗಳು

ಜಿಲ್ಲಾ ಮಟ್ಟದ ಯುವಜನ ಮೇಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು:2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ, ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ ಬಳಂಜ, ಬೆಳ್ತಂಗಡಿ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 18 ರಿಂದ 19 ವರೆಗೆ  ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಂಜ, ಬೆಳ್ತಂಗಡಿ ತಾಲೂಕಿನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಸಲಾಗುವುದು.

Advertisement
Advertisement

ಈ ಯುವಜನ ಮೇಳದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯ ವಿವಿರ ಇಂತಿವೆ: ಭಾವಗೀತೆ (ವೈಯಕ್ತಿಕ) 3 ನಿಮಿಷ, ಲಾವಣಿ (ವೈಯಕ್ತಿಕ) 4 ನಿಮಿಷ, ರಂಗಗೀತೆ (ವೈಯಕ್ತಿಕ) 3 ನಿಮಿಷ, ಏಕಪಾತ್ರಾಭಿನಯ (ವೈಯಕ್ತಿಕ) 5 ನಿಮಿಷ, ತುಳು ಭಾವಗೀತೆ (ವೈಯಕ್ತಿಕ) 3 ನಿಮಿಷ, ಗೀಗೀಪದ 5 ಜನ 4 ನಿಮಿಷ, ಜಾನಪದ ಗೀತೆ 6 ಜನ 4 ನಿಮಿಷ,  ಜಾನಪದ ನೃತ್ಯ 12 ಜನ 10 ನಿಮಿಷ, ಕೋಲಾಟ 12 ಜನ 6 ನಿಮಿಷ, ಭಜನೆ 8 ಜನ  07 ನಿಮಿಷ, ತುಳು ಪಾಡ್ದನ 2 ಜನ 03 ನಿಮಿಷ, ತುಳು ಜಾನಪದ ನೃತ್ಯ 10 ಜನ 10 ನಿಮಿಷ, ರಾಗಿ/ಜೋಳ ಬೀಸುವ ಪದ (ಯುವತಿಯರಿಗೆ ಮಾತ್ರ) 2 ಜನ 3 ನಿಮಿಷ, ಸೋಬಾನೆ ಪದ (ಯುವತಿಯರಿಗೆ ಮಾತ್ರ) 4 ಜನ 5 ನಿಮಿಷ, ವೀರಗಾಸೆ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ಡೊಳ್ಳುಕುಣಿತ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ದೊಡ್ಡಟ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಸಣ್ಣಾಟ (ಯುವಕರಿಗೆ ಮಾತ್ರ) 12 ಜನ 30 ನಿಮಿಷ, ಯಕ್ಷಗಾನ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) 6 ಜನ 10 ನಿಮಿಷ.

ಈ ಯುವಜನ ಮೇಳದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾವಣೆಗೊಂಡ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕಿನ ಕ್ರಿಯಾಶೀಲ ಯುವಕ/ಯುವತಿ ಮಂಡಲದ 15 ರಿಂದ 35 ವರ್ಷದೊಳಗಿನ ಸದಸ್ಯರುಗಳು ಭಾಗವಹಿಸಬಹುದಾಗಿದೆ.

ಸ್ಪರ್ಧೆಗಳಲ್ಲಿ   ಭಾಗವಹಿಸುವ  ಎಲ್ಲಾ  ಯುವಕ/ಯುವತಿಯರು  ಜನವರಿ 18 ರಂದು ಬೆಳಿಗ್ಗೆ 9 ಗಂಟೆಗೆಯೊಳಗೆ ಸಂಘಟಕರಲ್ಲಿ ದೂರವಾಣಿ ಸಂಖ್ಯೆ: 9901304348, 7975352686, 9480858238, 8971076439 ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

13 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

13 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

13 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

14 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

21 hours ago