ಸುದ್ದಿಗಳು

ಜಿಲ್ಲಾ ಮಟ್ಟದ ಯುವಜನ ಮೇಳ

Share

ಮಂಗಳೂರು:2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ, ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ ಬಳಂಜ, ಬೆಳ್ತಂಗಡಿ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 18 ರಿಂದ 19 ವರೆಗೆ  ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಂಜ, ಬೆಳ್ತಂಗಡಿ ತಾಲೂಕಿನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಸಲಾಗುವುದು.

ಈ ಯುವಜನ ಮೇಳದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯ ವಿವಿರ ಇಂತಿವೆ: ಭಾವಗೀತೆ (ವೈಯಕ್ತಿಕ) 3 ನಿಮಿಷ, ಲಾವಣಿ (ವೈಯಕ್ತಿಕ) 4 ನಿಮಿಷ, ರಂಗಗೀತೆ (ವೈಯಕ್ತಿಕ) 3 ನಿಮಿಷ, ಏಕಪಾತ್ರಾಭಿನಯ (ವೈಯಕ್ತಿಕ) 5 ನಿಮಿಷ, ತುಳು ಭಾವಗೀತೆ (ವೈಯಕ್ತಿಕ) 3 ನಿಮಿಷ, ಗೀಗೀಪದ 5 ಜನ 4 ನಿಮಿಷ, ಜಾನಪದ ಗೀತೆ 6 ಜನ 4 ನಿಮಿಷ,  ಜಾನಪದ ನೃತ್ಯ 12 ಜನ 10 ನಿಮಿಷ, ಕೋಲಾಟ 12 ಜನ 6 ನಿಮಿಷ, ಭಜನೆ 8 ಜನ  07 ನಿಮಿಷ, ತುಳು ಪಾಡ್ದನ 2 ಜನ 03 ನಿಮಿಷ, ತುಳು ಜಾನಪದ ನೃತ್ಯ 10 ಜನ 10 ನಿಮಿಷ, ರಾಗಿ/ಜೋಳ ಬೀಸುವ ಪದ (ಯುವತಿಯರಿಗೆ ಮಾತ್ರ) 2 ಜನ 3 ನಿಮಿಷ, ಸೋಬಾನೆ ಪದ (ಯುವತಿಯರಿಗೆ ಮಾತ್ರ) 4 ಜನ 5 ನಿಮಿಷ, ವೀರಗಾಸೆ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ಡೊಳ್ಳುಕುಣಿತ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ದೊಡ್ಡಟ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಸಣ್ಣಾಟ (ಯುವಕರಿಗೆ ಮಾತ್ರ) 12 ಜನ 30 ನಿಮಿಷ, ಯಕ್ಷಗಾನ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) 6 ಜನ 10 ನಿಮಿಷ.

ಈ ಯುವಜನ ಮೇಳದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾವಣೆಗೊಂಡ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕಿನ ಕ್ರಿಯಾಶೀಲ ಯುವಕ/ಯುವತಿ ಮಂಡಲದ 15 ರಿಂದ 35 ವರ್ಷದೊಳಗಿನ ಸದಸ್ಯರುಗಳು ಭಾಗವಹಿಸಬಹುದಾಗಿದೆ.

ಸ್ಪರ್ಧೆಗಳಲ್ಲಿ   ಭಾಗವಹಿಸುವ  ಎಲ್ಲಾ  ಯುವಕ/ಯುವತಿಯರು  ಜನವರಿ 18 ರಂದು ಬೆಳಿಗ್ಗೆ 9 ಗಂಟೆಗೆಯೊಳಗೆ ಸಂಘಟಕರಲ್ಲಿ ದೂರವಾಣಿ ಸಂಖ್ಯೆ: 9901304348, 7975352686, 9480858238, 8971076439 ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

35 minutes ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 hour ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 hour ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

17 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

17 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

17 hours ago