Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಯುವಜನ ಮೇಳ

Share

ಮಂಗಳೂರು:2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ, ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ ಬಳಂಜ, ಬೆಳ್ತಂಗಡಿ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 18 ರಿಂದ 19 ವರೆಗೆ  ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಂಜ, ಬೆಳ್ತಂಗಡಿ ತಾಲೂಕಿನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಸಲಾಗುವುದು.

ಈ ಯುವಜನ ಮೇಳದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯ ವಿವಿರ ಇಂತಿವೆ: ಭಾವಗೀತೆ (ವೈಯಕ್ತಿಕ) 3 ನಿಮಿಷ, ಲಾವಣಿ (ವೈಯಕ್ತಿಕ) 4 ನಿಮಿಷ, ರಂಗಗೀತೆ (ವೈಯಕ್ತಿಕ) 3 ನಿಮಿಷ, ಏಕಪಾತ್ರಾಭಿನಯ (ವೈಯಕ್ತಿಕ) 5 ನಿಮಿಷ, ತುಳು ಭಾವಗೀತೆ (ವೈಯಕ್ತಿಕ) 3 ನಿಮಿಷ, ಗೀಗೀಪದ 5 ಜನ 4 ನಿಮಿಷ, ಜಾನಪದ ಗೀತೆ 6 ಜನ 4 ನಿಮಿಷ,  ಜಾನಪದ ನೃತ್ಯ 12 ಜನ 10 ನಿಮಿಷ, ಕೋಲಾಟ 12 ಜನ 6 ನಿಮಿಷ, ಭಜನೆ 8 ಜನ  07 ನಿಮಿಷ, ತುಳು ಪಾಡ್ದನ 2 ಜನ 03 ನಿಮಿಷ, ತುಳು ಜಾನಪದ ನೃತ್ಯ 10 ಜನ 10 ನಿಮಿಷ, ರಾಗಿ/ಜೋಳ ಬೀಸುವ ಪದ (ಯುವತಿಯರಿಗೆ ಮಾತ್ರ) 2 ಜನ 3 ನಿಮಿಷ, ಸೋಬಾನೆ ಪದ (ಯುವತಿಯರಿಗೆ ಮಾತ್ರ) 4 ಜನ 5 ನಿಮಿಷ, ವೀರಗಾಸೆ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ಡೊಳ್ಳುಕುಣಿತ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ದೊಡ್ಡಟ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಸಣ್ಣಾಟ (ಯುವಕರಿಗೆ ಮಾತ್ರ) 12 ಜನ 30 ನಿಮಿಷ, ಯಕ್ಷಗಾನ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) 6 ಜನ 10 ನಿಮಿಷ.

ಈ ಯುವಜನ ಮೇಳದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾವಣೆಗೊಂಡ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕಿನ ಕ್ರಿಯಾಶೀಲ ಯುವಕ/ಯುವತಿ ಮಂಡಲದ 15 ರಿಂದ 35 ವರ್ಷದೊಳಗಿನ ಸದಸ್ಯರುಗಳು ಭಾಗವಹಿಸಬಹುದಾಗಿದೆ.

ಸ್ಪರ್ಧೆಗಳಲ್ಲಿ   ಭಾಗವಹಿಸುವ  ಎಲ್ಲಾ  ಯುವಕ/ಯುವತಿಯರು  ಜನವರಿ 18 ರಂದು ಬೆಳಿಗ್ಗೆ 9 ಗಂಟೆಗೆಯೊಳಗೆ ಸಂಘಟಕರಲ್ಲಿ ದೂರವಾಣಿ ಸಂಖ್ಯೆ: 9901304348, 7975352686, 9480858238, 8971076439 ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 hour ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

10 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

10 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

11 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

21 hours ago