Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಯುವಜನ ಮೇಳ

Share

ಮಂಗಳೂರು:2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ, ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ ಬಳಂಜ, ಬೆಳ್ತಂಗಡಿ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 18 ರಿಂದ 19 ವರೆಗೆ  ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಂಜ, ಬೆಳ್ತಂಗಡಿ ತಾಲೂಕಿನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಸಲಾಗುವುದು.

ಈ ಯುವಜನ ಮೇಳದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯ ವಿವಿರ ಇಂತಿವೆ: ಭಾವಗೀತೆ (ವೈಯಕ್ತಿಕ) 3 ನಿಮಿಷ, ಲಾವಣಿ (ವೈಯಕ್ತಿಕ) 4 ನಿಮಿಷ, ರಂಗಗೀತೆ (ವೈಯಕ್ತಿಕ) 3 ನಿಮಿಷ, ಏಕಪಾತ್ರಾಭಿನಯ (ವೈಯಕ್ತಿಕ) 5 ನಿಮಿಷ, ತುಳು ಭಾವಗೀತೆ (ವೈಯಕ್ತಿಕ) 3 ನಿಮಿಷ, ಗೀಗೀಪದ 5 ಜನ 4 ನಿಮಿಷ, ಜಾನಪದ ಗೀತೆ 6 ಜನ 4 ನಿಮಿಷ,  ಜಾನಪದ ನೃತ್ಯ 12 ಜನ 10 ನಿಮಿಷ, ಕೋಲಾಟ 12 ಜನ 6 ನಿಮಿಷ, ಭಜನೆ 8 ಜನ  07 ನಿಮಿಷ, ತುಳು ಪಾಡ್ದನ 2 ಜನ 03 ನಿಮಿಷ, ತುಳು ಜಾನಪದ ನೃತ್ಯ 10 ಜನ 10 ನಿಮಿಷ, ರಾಗಿ/ಜೋಳ ಬೀಸುವ ಪದ (ಯುವತಿಯರಿಗೆ ಮಾತ್ರ) 2 ಜನ 3 ನಿಮಿಷ, ಸೋಬಾನೆ ಪದ (ಯುವತಿಯರಿಗೆ ಮಾತ್ರ) 4 ಜನ 5 ನಿಮಿಷ, ವೀರಗಾಸೆ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ಡೊಳ್ಳುಕುಣಿತ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ದೊಡ್ಡಟ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಸಣ್ಣಾಟ (ಯುವಕರಿಗೆ ಮಾತ್ರ) 12 ಜನ 30 ನಿಮಿಷ, ಯಕ್ಷಗಾನ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) 6 ಜನ 10 ನಿಮಿಷ.

ಈ ಯುವಜನ ಮೇಳದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾವಣೆಗೊಂಡ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕಿನ ಕ್ರಿಯಾಶೀಲ ಯುವಕ/ಯುವತಿ ಮಂಡಲದ 15 ರಿಂದ 35 ವರ್ಷದೊಳಗಿನ ಸದಸ್ಯರುಗಳು ಭಾಗವಹಿಸಬಹುದಾಗಿದೆ.

ಸ್ಪರ್ಧೆಗಳಲ್ಲಿ   ಭಾಗವಹಿಸುವ  ಎಲ್ಲಾ  ಯುವಕ/ಯುವತಿಯರು  ಜನವರಿ 18 ರಂದು ಬೆಳಿಗ್ಗೆ 9 ಗಂಟೆಗೆಯೊಳಗೆ ಸಂಘಟಕರಲ್ಲಿ ದೂರವಾಣಿ ಸಂಖ್ಯೆ: 9901304348, 7975352686, 9480858238, 8971076439 ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

5 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

7 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

11 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

14 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

15 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago