Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಯುವಜನ ಮೇಳ

Share

ಮಂಗಳೂರು:2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ, ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ ಬಳಂಜ, ಬೆಳ್ತಂಗಡಿ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 18 ರಿಂದ 19 ವರೆಗೆ  ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಂಜ, ಬೆಳ್ತಂಗಡಿ ತಾಲೂಕಿನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಸಲಾಗುವುದು.

ಈ ಯುವಜನ ಮೇಳದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯ ವಿವಿರ ಇಂತಿವೆ: ಭಾವಗೀತೆ (ವೈಯಕ್ತಿಕ) 3 ನಿಮಿಷ, ಲಾವಣಿ (ವೈಯಕ್ತಿಕ) 4 ನಿಮಿಷ, ರಂಗಗೀತೆ (ವೈಯಕ್ತಿಕ) 3 ನಿಮಿಷ, ಏಕಪಾತ್ರಾಭಿನಯ (ವೈಯಕ್ತಿಕ) 5 ನಿಮಿಷ, ತುಳು ಭಾವಗೀತೆ (ವೈಯಕ್ತಿಕ) 3 ನಿಮಿಷ, ಗೀಗೀಪದ 5 ಜನ 4 ನಿಮಿಷ, ಜಾನಪದ ಗೀತೆ 6 ಜನ 4 ನಿಮಿಷ,  ಜಾನಪದ ನೃತ್ಯ 12 ಜನ 10 ನಿಮಿಷ, ಕೋಲಾಟ 12 ಜನ 6 ನಿಮಿಷ, ಭಜನೆ 8 ಜನ  07 ನಿಮಿಷ, ತುಳು ಪಾಡ್ದನ 2 ಜನ 03 ನಿಮಿಷ, ತುಳು ಜಾನಪದ ನೃತ್ಯ 10 ಜನ 10 ನಿಮಿಷ, ರಾಗಿ/ಜೋಳ ಬೀಸುವ ಪದ (ಯುವತಿಯರಿಗೆ ಮಾತ್ರ) 2 ಜನ 3 ನಿಮಿಷ, ಸೋಬಾನೆ ಪದ (ಯುವತಿಯರಿಗೆ ಮಾತ್ರ) 4 ಜನ 5 ನಿಮಿಷ, ವೀರಗಾಸೆ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ಡೊಳ್ಳುಕುಣಿತ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ದೊಡ್ಡಟ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಸಣ್ಣಾಟ (ಯುವಕರಿಗೆ ಮಾತ್ರ) 12 ಜನ 30 ನಿಮಿಷ, ಯಕ್ಷಗಾನ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) 6 ಜನ 10 ನಿಮಿಷ.

ಈ ಯುವಜನ ಮೇಳದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾವಣೆಗೊಂಡ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕಿನ ಕ್ರಿಯಾಶೀಲ ಯುವಕ/ಯುವತಿ ಮಂಡಲದ 15 ರಿಂದ 35 ವರ್ಷದೊಳಗಿನ ಸದಸ್ಯರುಗಳು ಭಾಗವಹಿಸಬಹುದಾಗಿದೆ.

ಸ್ಪರ್ಧೆಗಳಲ್ಲಿ   ಭಾಗವಹಿಸುವ  ಎಲ್ಲಾ  ಯುವಕ/ಯುವತಿಯರು  ಜನವರಿ 18 ರಂದು ಬೆಳಿಗ್ಗೆ 9 ಗಂಟೆಗೆಯೊಳಗೆ ಸಂಘಟಕರಲ್ಲಿ ದೂರವಾಣಿ ಸಂಖ್ಯೆ: 9901304348, 7975352686, 9480858238, 8971076439 ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

5 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

12 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

13 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

14 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

20 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 day ago