Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಯುವಜನ ಮೇಳ

Share

ಮಂಗಳೂರು:2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ, ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ ಬಳಂಜ, ಬೆಳ್ತಂಗಡಿ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 18 ರಿಂದ 19 ವರೆಗೆ  ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಂಜ, ಬೆಳ್ತಂಗಡಿ ತಾಲೂಕಿನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಸಲಾಗುವುದು.

ಈ ಯುವಜನ ಮೇಳದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯ ವಿವಿರ ಇಂತಿವೆ: ಭಾವಗೀತೆ (ವೈಯಕ್ತಿಕ) 3 ನಿಮಿಷ, ಲಾವಣಿ (ವೈಯಕ್ತಿಕ) 4 ನಿಮಿಷ, ರಂಗಗೀತೆ (ವೈಯಕ್ತಿಕ) 3 ನಿಮಿಷ, ಏಕಪಾತ್ರಾಭಿನಯ (ವೈಯಕ್ತಿಕ) 5 ನಿಮಿಷ, ತುಳು ಭಾವಗೀತೆ (ವೈಯಕ್ತಿಕ) 3 ನಿಮಿಷ, ಗೀಗೀಪದ 5 ಜನ 4 ನಿಮಿಷ, ಜಾನಪದ ಗೀತೆ 6 ಜನ 4 ನಿಮಿಷ,  ಜಾನಪದ ನೃತ್ಯ 12 ಜನ 10 ನಿಮಿಷ, ಕೋಲಾಟ 12 ಜನ 6 ನಿಮಿಷ, ಭಜನೆ 8 ಜನ  07 ನಿಮಿಷ, ತುಳು ಪಾಡ್ದನ 2 ಜನ 03 ನಿಮಿಷ, ತುಳು ಜಾನಪದ ನೃತ್ಯ 10 ಜನ 10 ನಿಮಿಷ, ರಾಗಿ/ಜೋಳ ಬೀಸುವ ಪದ (ಯುವತಿಯರಿಗೆ ಮಾತ್ರ) 2 ಜನ 3 ನಿಮಿಷ, ಸೋಬಾನೆ ಪದ (ಯುವತಿಯರಿಗೆ ಮಾತ್ರ) 4 ಜನ 5 ನಿಮಿಷ, ವೀರಗಾಸೆ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ಡೊಳ್ಳುಕುಣಿತ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ದೊಡ್ಡಟ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಸಣ್ಣಾಟ (ಯುವಕರಿಗೆ ಮಾತ್ರ) 12 ಜನ 30 ನಿಮಿಷ, ಯಕ್ಷಗಾನ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) 6 ಜನ 10 ನಿಮಿಷ.

ಈ ಯುವಜನ ಮೇಳದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾವಣೆಗೊಂಡ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕಿನ ಕ್ರಿಯಾಶೀಲ ಯುವಕ/ಯುವತಿ ಮಂಡಲದ 15 ರಿಂದ 35 ವರ್ಷದೊಳಗಿನ ಸದಸ್ಯರುಗಳು ಭಾಗವಹಿಸಬಹುದಾಗಿದೆ.

ಸ್ಪರ್ಧೆಗಳಲ್ಲಿ   ಭಾಗವಹಿಸುವ  ಎಲ್ಲಾ  ಯುವಕ/ಯುವತಿಯರು  ಜನವರಿ 18 ರಂದು ಬೆಳಿಗ್ಗೆ 9 ಗಂಟೆಗೆಯೊಳಗೆ ಸಂಘಟಕರಲ್ಲಿ ದೂರವಾಣಿ ಸಂಖ್ಯೆ: 9901304348, 7975352686, 9480858238, 8971076439 ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

3 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

10 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

21 hours ago