Advertisement
ಸುದ್ದಿಗಳು

ಜಿಲ್ಲಾ ಮಟ್ಟದ ಯುವಜನ ಮೇಳ

Share

ಮಂಗಳೂರು:2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ, ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ ಬಳಂಜ, ಬೆಳ್ತಂಗಡಿ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 18 ರಿಂದ 19 ವರೆಗೆ  ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಂಜ, ಬೆಳ್ತಂಗಡಿ ತಾಲೂಕಿನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಸಲಾಗುವುದು.

ಈ ಯುವಜನ ಮೇಳದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯ ವಿವಿರ ಇಂತಿವೆ: ಭಾವಗೀತೆ (ವೈಯಕ್ತಿಕ) 3 ನಿಮಿಷ, ಲಾವಣಿ (ವೈಯಕ್ತಿಕ) 4 ನಿಮಿಷ, ರಂಗಗೀತೆ (ವೈಯಕ್ತಿಕ) 3 ನಿಮಿಷ, ಏಕಪಾತ್ರಾಭಿನಯ (ವೈಯಕ್ತಿಕ) 5 ನಿಮಿಷ, ತುಳು ಭಾವಗೀತೆ (ವೈಯಕ್ತಿಕ) 3 ನಿಮಿಷ, ಗೀಗೀಪದ 5 ಜನ 4 ನಿಮಿಷ, ಜಾನಪದ ಗೀತೆ 6 ಜನ 4 ನಿಮಿಷ,  ಜಾನಪದ ನೃತ್ಯ 12 ಜನ 10 ನಿಮಿಷ, ಕೋಲಾಟ 12 ಜನ 6 ನಿಮಿಷ, ಭಜನೆ 8 ಜನ  07 ನಿಮಿಷ, ತುಳು ಪಾಡ್ದನ 2 ಜನ 03 ನಿಮಿಷ, ತುಳು ಜಾನಪದ ನೃತ್ಯ 10 ಜನ 10 ನಿಮಿಷ, ರಾಗಿ/ಜೋಳ ಬೀಸುವ ಪದ (ಯುವತಿಯರಿಗೆ ಮಾತ್ರ) 2 ಜನ 3 ನಿಮಿಷ, ಸೋಬಾನೆ ಪದ (ಯುವತಿಯರಿಗೆ ಮಾತ್ರ) 4 ಜನ 5 ನಿಮಿಷ, ವೀರಗಾಸೆ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ಡೊಳ್ಳುಕುಣಿತ (ಯುವಕರಿಗೆ ಮಾತ್ರ) 12 ಜನ 10 ನಿಮಿಷ, ದೊಡ್ಡಟ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಸಣ್ಣಾಟ (ಯುವಕರಿಗೆ ಮಾತ್ರ) 12 ಜನ 30 ನಿಮಿಷ, ಯಕ್ಷಗಾನ (ಯುವಕರಿಗೆ ಮಾತ್ರ) 15 ಜನ 45 ನಿಮಿಷ, ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) 6 ಜನ 10 ನಿಮಿಷ.

ಈ ಯುವಜನ ಮೇಳದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾವಣೆಗೊಂಡ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ತಾಲೂಕಿನ ಕ್ರಿಯಾಶೀಲ ಯುವಕ/ಯುವತಿ ಮಂಡಲದ 15 ರಿಂದ 35 ವರ್ಷದೊಳಗಿನ ಸದಸ್ಯರುಗಳು ಭಾಗವಹಿಸಬಹುದಾಗಿದೆ.

ಸ್ಪರ್ಧೆಗಳಲ್ಲಿ   ಭಾಗವಹಿಸುವ  ಎಲ್ಲಾ  ಯುವಕ/ಯುವತಿಯರು  ಜನವರಿ 18 ರಂದು ಬೆಳಿಗ್ಗೆ 9 ಗಂಟೆಗೆಯೊಳಗೆ ಸಂಘಟಕರಲ್ಲಿ ದೂರವಾಣಿ ಸಂಖ್ಯೆ: 9901304348, 7975352686, 9480858238, 8971076439 ಮೂಲಕ ಸಂಪರ್ಕಿಸಿ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

14 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago