Advertisement
ಮಾಹಿತಿ

ಜಿಲ್ಲಾ ಯುವ ಪ್ರಶಸ್ತಿ- ಅರ್ಜಿ ಆಹ್ವಾನ

Share

ಮಂಗಳೂರು : 2019-20ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿರುವ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ ಹಾಗೂ ಯುವಜನರಿಗೆ ಜಿಲ್ಲಾ ಯುವ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಅಕ್ಟೋಬರ್ 25ರೊಳಗೆ ಸಲ್ಲಿಸಬೇಕು.

Advertisement

ಆಸಕ್ತ ಯುವಕ/ಯುವತಿಯರು 15 ರಿಂದ 35 ವಯೋಮಿತಿಯೊಳಗಿನವರಾಗಿರ ಬೇಕು. ವೈಯಕ್ತಿಕ ಮತ್ತು ಸಾಂಘಿಕ ಪ್ರಸ್ತಾವನೆಯನ್ನು ತಯಾರಿಸುವಾಗ ಎಪ್ರಿಲ್ 1, 2018ರಿಂದ ಮಾರ್ಚ್ 31, 2019 ರವರೆಗೆ ಯುವಕ/ಯುವತಿ ಮಂಡಲ ಹಾಗೂ ಯುವಕ/ಯುವತಿಯರು ಕೈಗೊಂಡಿರುವ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.ಈ ಅವಧಿಯಲ್ಲಿ ಕಾರ್ಯಕ್ರಮ ನಡೆಸಿದ ಅಥವಾ ಸಹಕರಿಸಿದ ಬಗ್ಗೆ ಕಾರ್ಯಕ್ರಮದ ದಿನಾಂಕ, ಭಾವಚಿತ್ರ, ಪತ್ರಿಕಾ ತುಣುಕು, ಆಮಂತ್ರಣ ಪತ್ರಿಕೆ ಇತ್ಯಾದಿಗಳ ಮೂಲ ಪ್ರತಿಗಳನ್ನು ಎ-4 ಅಳತೆಯಲ್ಲಿ ಸಲ್ಲಿಸಬೇಕು. ಸ್ಲೈಡ್ ಹಾಗೂ ವಿಡಿಯೋಗಳ ದಾಖಲೆಗಳನ್ನು ಒದಗಿಸಬೇಕು.

ವೈಯಕ್ತಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಯುವಕ/ಯುವತಿಯರು ಯಾವುದೇ ಕ್ರಿಮಿನಲ್ ಮೊಕದ್ದಮೆಗಳಿಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು. ಅರ್ಜಿದಾರರು/ಯುವಸಂಘಗಳು ಇಲಾಖೆಯು ಆಯ್ಕೆ ಮಾಡಿರುವ ಸಮುದಾಯ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿರಬೇಕು.ಹೆಚ್ಚಿನ ಮಾಹಿತಿ ಹಾಗೂ  ಅರ್ಜಿ ನಮೂನೆಗಾಗಿ  ದೂರವಾಣಿ ಸಂಖ್ಯೆ :- 0824-2451264 ನ್ನು ಸಂಪರ್ಕಿಸಬಹುದು ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೆಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಇವರನ್ನು ಸಂಪರ್ಕಿಸ ಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

12 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

12 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 day ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago