Advertisement
ಮಾಹಿತಿ

ಜಿಲ್ಲಾ ಯುವ ಪ್ರಶಸ್ತಿ- ಅರ್ಜಿ ಆಹ್ವಾನ

Share

ಮಂಗಳೂರು : 2019-20ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿರುವ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ ಹಾಗೂ ಯುವಜನರಿಗೆ ಜಿಲ್ಲಾ ಯುವ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಅಕ್ಟೋಬರ್ 25ರೊಳಗೆ ಸಲ್ಲಿಸಬೇಕು.

ಆಸಕ್ತ ಯುವಕ/ಯುವತಿಯರು 15 ರಿಂದ 35 ವಯೋಮಿತಿಯೊಳಗಿನವರಾಗಿರ ಬೇಕು. ವೈಯಕ್ತಿಕ ಮತ್ತು ಸಾಂಘಿಕ ಪ್ರಸ್ತಾವನೆಯನ್ನು ತಯಾರಿಸುವಾಗ ಎಪ್ರಿಲ್ 1, 2018ರಿಂದ ಮಾರ್ಚ್ 31, 2019 ರವರೆಗೆ ಯುವಕ/ಯುವತಿ ಮಂಡಲ ಹಾಗೂ ಯುವಕ/ಯುವತಿಯರು ಕೈಗೊಂಡಿರುವ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.ಈ ಅವಧಿಯಲ್ಲಿ ಕಾರ್ಯಕ್ರಮ ನಡೆಸಿದ ಅಥವಾ ಸಹಕರಿಸಿದ ಬಗ್ಗೆ ಕಾರ್ಯಕ್ರಮದ ದಿನಾಂಕ, ಭಾವಚಿತ್ರ, ಪತ್ರಿಕಾ ತುಣುಕು, ಆಮಂತ್ರಣ ಪತ್ರಿಕೆ ಇತ್ಯಾದಿಗಳ ಮೂಲ ಪ್ರತಿಗಳನ್ನು ಎ-4 ಅಳತೆಯಲ್ಲಿ ಸಲ್ಲಿಸಬೇಕು. ಸ್ಲೈಡ್ ಹಾಗೂ ವಿಡಿಯೋಗಳ ದಾಖಲೆಗಳನ್ನು ಒದಗಿಸಬೇಕು.

ವೈಯಕ್ತಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಯುವಕ/ಯುವತಿಯರು ಯಾವುದೇ ಕ್ರಿಮಿನಲ್ ಮೊಕದ್ದಮೆಗಳಿಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು. ಅರ್ಜಿದಾರರು/ಯುವಸಂಘಗಳು ಇಲಾಖೆಯು ಆಯ್ಕೆ ಮಾಡಿರುವ ಸಮುದಾಯ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿರಬೇಕು.ಹೆಚ್ಚಿನ ಮಾಹಿತಿ ಹಾಗೂ  ಅರ್ಜಿ ನಮೂನೆಗಾಗಿ  ದೂರವಾಣಿ ಸಂಖ್ಯೆ :- 0824-2451264 ನ್ನು ಸಂಪರ್ಕಿಸಬಹುದು ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೆಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಇವರನ್ನು ಸಂಪರ್ಕಿಸ ಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 hour ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

9 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

11 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

17 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

18 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago