ಮಂಗಳೂರು : 2019-20ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿರುವ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ ಹಾಗೂ ಯುವಜನರಿಗೆ ಜಿಲ್ಲಾ ಯುವ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಅಕ್ಟೋಬರ್ 25ರೊಳಗೆ ಸಲ್ಲಿಸಬೇಕು.
ಆಸಕ್ತ ಯುವಕ/ಯುವತಿಯರು 15 ರಿಂದ 35 ವಯೋಮಿತಿಯೊಳಗಿನವರಾಗಿರ ಬೇಕು. ವೈಯಕ್ತಿಕ ಮತ್ತು ಸಾಂಘಿಕ ಪ್ರಸ್ತಾವನೆಯನ್ನು ತಯಾರಿಸುವಾಗ ಎಪ್ರಿಲ್ 1, 2018ರಿಂದ ಮಾರ್ಚ್ 31, 2019 ರವರೆಗೆ ಯುವಕ/ಯುವತಿ ಮಂಡಲ ಹಾಗೂ ಯುವಕ/ಯುವತಿಯರು ಕೈಗೊಂಡಿರುವ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.ಈ ಅವಧಿಯಲ್ಲಿ ಕಾರ್ಯಕ್ರಮ ನಡೆಸಿದ ಅಥವಾ ಸಹಕರಿಸಿದ ಬಗ್ಗೆ ಕಾರ್ಯಕ್ರಮದ ದಿನಾಂಕ, ಭಾವಚಿತ್ರ, ಪತ್ರಿಕಾ ತುಣುಕು, ಆಮಂತ್ರಣ ಪತ್ರಿಕೆ ಇತ್ಯಾದಿಗಳ ಮೂಲ ಪ್ರತಿಗಳನ್ನು ಎ-4 ಅಳತೆಯಲ್ಲಿ ಸಲ್ಲಿಸಬೇಕು. ಸ್ಲೈಡ್ ಹಾಗೂ ವಿಡಿಯೋಗಳ ದಾಖಲೆಗಳನ್ನು ಒದಗಿಸಬೇಕು.
ವೈಯಕ್ತಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಯುವಕ/ಯುವತಿಯರು ಯಾವುದೇ ಕ್ರಿಮಿನಲ್ ಮೊಕದ್ದಮೆಗಳಿಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು. ಅರ್ಜಿದಾರರು/ಯುವಸಂಘಗಳು ಇಲಾಖೆಯು ಆಯ್ಕೆ ಮಾಡಿರುವ ಸಮುದಾಯ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿರಬೇಕು.ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ದೂರವಾಣಿ ಸಂಖ್ಯೆ :- 0824-2451264 ನ್ನು ಸಂಪರ್ಕಿಸಬಹುದು ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೆಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಇವರನ್ನು ಸಂಪರ್ಕಿಸ ಬಹುದು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…