Advertisement
ಸುದ್ದಿಗಳು

ಜಿಲ್ಲೆಯಲ್ಲಿ ಹಬ್ಬುವ ಡೆಂಘೆ ಜ್ವರ : ಇಲಾಖೆ, ಸ್ಥಳೀಯಾಡಳಿತಗಳ ನಿರ್ಲಕ್ಷ್ಯವೂ ಕಾರಣವೇ ?

Share

ಸುಳ್ಯ: ಜಿಲ್ಲೆಯಲ್ಲಿ ಡೆಂಘೆ ಜ್ವರ ವ್ಯಾಪಕವಾಗಿ ಹರಡಿತ್ತು. ಹಲವಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಪತ್ರಕರ್ತನೂ ಸೇರಿದಂತೆ ವಿವಿದೆಡೆ ಕೆಲವು ಮಂದಿ ಸಾವನ್ನಪ್ಪಿದ್ದಾರೆ. ಇಲಾಖೆಗಳು ಸೂಕ್ತ ಕ್ರಮದ ಬಗ್ಗೆ ಭರವಸೆ ನೀಡುತ್ತವೆ. ಅಧಿಕಾರಿಗಳು ಕ್ರಮ ಕೈಗೊಂಡ ಬಗ್ಗೆ ವರದಿ ನೀಡುತ್ತವೆ. ಆದರೆ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತಗಳು ಮುಂಜಾಗ್ರತಾ ಕ್ರಮಕೈಗೊಳ್ಳದೇ ಇರುವುದೂ ಡೆಂಘೆ ಜ್ವರ ಹರಡಲು ಕಾರಣವಾಗುತ್ತಾ ಎನ್ನುವ ಸಂದೇಹ ಬಂದಿದೆ. ಇದಕ್ಕೆ ಒಂದು ಉದಾಹರಣೆ ಇಲ್ಲಿದೆ,

 

 

ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಡೆಂಘೆ ಜ್ವರ ವ್ಯಾಪಕವಾಗಿ ಹರಡಿತ್ತು. ಅದರಲ್ಲಿ ಗುತ್ತಿಗಾರು ಸುತ್ತಮುತ್ತ ಹೆಚ್ಚಾಗಿ ಜ್ವರದ ಬಾಧೆ ಕಂಡುಬಂದಿತ್ತು. ಹೀಗಾಗಿ ಇಲ್ಲಿನ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರನ್ನೂ ಕೆಲವು ದಿನಗಳ ಕಾಲ ವ್ಯವಸ್ಥೆ ಮಾಡಲಾಗಿತ್ತು. ಅದರ ಜೊತೆಗೆ ಕನಕಮಜಲು, ಪಂಜ  ಸೇರಿದಂತೆ ವಿವಿಧ ಗ್ರಾಮಗಳಲ್ಲಿ  ಜ್ವರದ ಬಾಧೆಯೂ ಹೆಚ್ಚಾಗಿತ್ತು. ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಸೊಳ್ಳೆ ತಾಣಗಳ ನಾಶ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದವು  ಸೂಚನೆ ನೀಡುತ್ತಿದ್ದರು. ಇದನ್ನು ಮನೆಯವರೂ ಅನುಸರಿಸುತ್ತಿದ್ದರು. ಆದರೆ ಪೇಟೆಯ ಸ್ವಚ್ಛತೆ, ತ್ಯಾಜ್ಯಗಳ ಎಸೆಯುವುದರ ವಿರುದ್ಧ ಇಲಾಖೆಗಳು, ಸ್ಥಳೀಯ ಪಂಚಾಯತ್ ಕ್ರಮಕೈಗೊಂಡಿಲ್ಲ.

ಸುಳ್ಯ ತಾಲೂಕಿನ ಗುತ್ತಿಗಾರು ಪೇಟೆಯ ಕೆಳಗಿನ ಪೇಟೆಯ ಬಳ್ಳಕ್ಕ – ಪಂಜ ರಸ್ತೆ ತಿರುಗುವ ಪ್ರದೇಶದಲ್ಲಿ  ತ್ಯಾಜ್ಯ ಎಸೆಯಲಾಗುತ್ತಿತ್ತು. ಇಂದಲ್ಲ ಕಳೆದ ಹಲವು ಸಮಯಗಳಿಂದ ಇಲ್ಲಿನ ಚರಂಡಿಗೆ ಎಸೆಯಲಾಗುತ್ತದೆ. ಹೀಗಾಗಿ ಸೊಳ್ಳೆ ಉತ್ಪಾದನೆ ಮಾತ್ರವಲ್ಲ ವಿಪರೀತ ವಾಸನೆಯೂ ಇರುತ್ತದೆ, ಹೀಗಾಗಿ ರೋಗ ಹರಡುವ ಎಲ್ಲಾ ಸಾಧ್ಯತೆಯೂ ಇದೆ. ಈ ಬಗ್ಗೆ ಸ್ಥಳೀಯರು ಈ ಹಿಂದೆಯೂ ಗುತ್ತಿಗಾರು ಪಂಚಾಯತ್ ಗೆ ದೂರು ನೀಡಿದ್ದರು. ಆ ಬಳಿಕ ಸ್ಥಳೀಯರೇ ಈ ತ್ಯಾಜ್ಯ ತೆರವು ಮಾಡಿದ್ದರು.  ತ್ಯಾಜ್ಯ ಎಸೆಯುವ ಬಗ್ಗೆ ಹಾಗೂ ರೋಗ ಹರಡುವ ಭೀತಿ ಇದೆ ಎಂದು 7-7-2017 ರಲ್ಲಿ ಒಮ್ಮೆ ದೂರು ನೀಡಲಾಗಿತ್ತು. ಹಾಗಿದ್ದರೂ ಕ್ರಮವಾಗದ ಹಿನ್ನೆಲೆಯಲ್ಲಿ ಸ್ಥಳೀಯರೇ ಸ್ವಚ್ಛ ಮಾಡಿದ್ದರು.

2017 ರಲ್ಲಿ ನೀಡಿದ ದೂರು

 

 

2019 ರಲ್ಲಿ ನೀಡಿದ ದೂರು

 

ಇದೀಗ 4-1-2019 ರಂದು ಮತ್ತೆ ತ್ಯಾಜ್ಯ ಎಸೆಯುವ ಹಾಗೂ ರೋಗ ಹರಡುವ ಭೀತಿ ಇದೆ ಎಂದು ಗುತ್ತಿಗಾರು ಪಂಚಾಯತ್ ಗೆ ದೂರು ನೀಡಲಾಗಿತ್ತು. ಈ ದೂರು ನೀಡಿ ತಿಂಗಳು 7 ಆದರೂ ಯಾವುದೇ ಕ್ರಮ ಇದುವರೆಗೆ ಆಗಿಲ್ಲ. ಪಂಚಾಯತ್ ಆಡಳಿತಗಳು ಜನರ ಸಮಸ್ಯೆಗಳಿಗೆ ಎಷ್ಟು ಸ್ಪಂದನೆ ನೀಡುತ್ತವೆ ಎಂಬುದಕ್ಕೆ ಇದೊಂದು ಉದಾಹರಣೆಯಾಗಿದೆ. ಸ್ವಚ್ಛತೆ ಎಲ್ಲಾ ನಾಗರೀಕರ ಜವಾಬ್ದಾರಿ ಹೌದು. ಆದರೆ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳೇ ದೂರು ನೀಡಿದರೂ ಮೌನ ತಾಳುವುದು  ವ್ಯವಸ್ಥೆಗೆ ಹಾಗೂ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ವ್ಯವಸ್ಥೆಗಳಿಂದಲೇ ಆಡಳಿತದ ಮೇಲೆ, ಅಧಿಕಾರಿಗಳ ಮೇಲೆ, ಇಲಾಖೆಗಳ ಮೇಲೆ ವಿಶ್ವಾಸ ಕಳೆದುಕೊಳ್ಳುವಂತಾಗುತ್ತದೆ.  ಪ್ರತೀ ಬಾರಿಯೂ ದೂರು ನೀಡಿ ನಂತರ ಸಾರ್ವಜನಿಕರೇ ಸ್ವಚ್ಛ ಮಾಡುವ ವ್ಯವಸ್ಥೆ ಆಡಳಿತ ಯಂತ್ರದಲ್ಲಿನ ದೌರ್ಬಲ್ಯದ ಸಂಕೇತವಾಗಿದೆ. ಜನಪ್ರತಿನಿಧಿಗಳೂ ಈ ಬಗ್ಗೆ ಮೌನ ವಹಿಸುವುದು ಅಚ್ಚರಿಗೆ ಕಾರಣವಾಗಿದೆ.

ಗುತ್ತಿಗಾರು ಪ್ರದೇಶದಲ್ಲಿ 2 ವರ್ಷದ ಹಿಂದೆಯೂ ವ್ಯಾಪಕವಾಗಿ ಡೆಂಘೆ ಜ್ವರ ಕಂಡುಬಂದಿತ್ತು. ಆ ಸಂದರ್ಭ ಆರೋಗ್ಯ ಸಚಿವರೇ ಗುತ್ತಿಗಾರಿಗೆ ಬಂದಿದ್ದರು. ಈ ವರ್ಷವೂ ವ್ಯಾಪಕ ಡೆಂಘೆ ಜ್ವರ ಕಂಡುಬಂದಿತ್ತು. ಹೀಗಾಗಿ ಇಲ್ಲಿನ ಸ್ವಚ್ಛತೆಯ ಕೊರತೆಯೇ ಡೆಂಘೆ ಹಾಗೂ ಸಾಂಕ್ರಾಮಿಕ ರೋಗ ಹರಡಲು ಕಾರಣವೇ ಎಂಬ ಸಂದೇಹ ಈಗ ಮೂಡಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

5 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

9 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

18 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

19 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

20 hours ago