Advertisement
ಜಿಲ್ಲೆ

ಜಿಲ್ಲೆಯ ತಾಲೂಕು ಮಟ್ಟದ “ರಾಣಿ ಅಬ್ಬಕ್ಕ ಪಡೆ” ಉದ್ಘಾಟನೆ

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಹಿಳಾ ಪೊಲೀಸರನ್ನೊಳಗೊಂಡ “ರಾಣಿ ಅಬ್ಬಕ್ಕ ಪಡೆ”ಯನ್ನು  ಪೊಲೀಸು ಅಧೀಕ್ಷಕ ಲಕ್ಷ್ಮೀ ಪ್ರಸಾದ್ ಉದ್ಘಾಟಿಸಿ ಚಾಲನೆ ನೀಡಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸು ಅಧೀಕ್ಷಕ ವಿಕ್ರಮ್ ಆಮ್ಟೆ , ಸಹಾಯಕ ಪೊಲೀಸ್ ಅಧೀಕ್ಷಕ  ಸೈದುಲ್ ಅದಾವತ್, ಪೊಲೀಸ್‌ ವೃತ್ತ ನಿರೀಕ್ಷಕ  ಶರಣಗೌಡ ವಿ ಹೆಚ್‌ ,

ಪೊಲೀಸ್‌ ಅಧಿಕಾರಿಗಳಾದ ಸಂದೇಶ್‌ ಪಿ ಸಿ , ಸತೀಶ್‌ ಕುಮಾರ್‌ , ಮಂಜುನಾಥ್‌  ಹಾಗೂ ಜಿಲ್ಲಾ ಮಟ್ಟದ “ರಾಣಿ ಅಬ್ಬಕ್ಕ ಪಡೆ” ತಂಡದ ಎಲ್ಲಾ ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಣಿ ಅಬ್ಬಕ್ಕ ಪಡೆ” ತಂಡವು ಪ್ರತೀ ತಾಲೂಕಿಗೆ 2 ತಂಡವನ್ನು ರಚಿಸಿದ್ದು ಪ್ರತೀ ತಂಡದಲ್ಲಿ 06 ಜನ ಯುವ ಉತ್ಸಾಹಿ ಮಹಿಳಾ ಸಿಬ್ಬಂದಿಗಳಿರುತ್ತಾರೆ. ತಾಲೂಕು ಮಟ್ಟದಲ್ಲಿ ಪೊಲೀಸ್‌ ವೃತ್ತ ನಿರೀಕ್ಷಕರು ಮೇಲ್ವೀಚಾರಕಾಗಿದ್ದು, ಸಹಾಕಯಕ ಪೊಲೀಸ್‌ ಅಧೀಕ್ಷಕರವರು ಮಾರ್ಗದರ್ಶಕರಾಗಿರುತ್ತಾರೆ. ರಾಣಿ ಅಬ್ಬಕ್ಕ ಪಡೆಯ ಸಿಬ್ಬಂಧಿಗಳು ವಿಶೇಷ ಸಮವಸ್ತ್ರ ಹೊಂದಿರುತ್ತಾರೆ. ನೀಳಿ ಬಣ್ಣದ ಟೀ-ಶರ್ಟ್‌ ಮತ್ತು ಡಾಂಗ್ರಿ ಪ್ಯಾಂಟ್‌ , ಕಮಾಂಡೋ ಶೂ ಮತ್ತು ಟೋಪಿ ಸಿಬ್ಬಂಧಿಯವರ ಸಮವಸ್ತ್ರವಾಗಿರುತ್ತದೆ.ಪ್ರತೀ ತಾಲೂಕು ಮಟ್ಟದ ತಂಡಗಳಿಗೆ ರಾಣಿ ಅಬ್ಬಕ್ಕ ಪಹರೆ ಪಡೆ ವಾಹನದಲ್ಲಿ ಗಸ್ತು ಮಾಡುತ್ತಾ ಕರ್ತವ್ಯ ನಿರ್ವಹಿಸುತ್ತಾರೆ .

“ರಾಣಿ ಅಬ್ಬಕ್ಕ ಪಡೆ” ಕಾರ್ಯಚಟುವಟಿಕೆ :

“ರಾಣಿ ಅಬ್ಬಕ್ಕ ಪಡೆ” ತಂಡವು ಹೆಣ್ಣುಮಕ್ಕಳು ಮತ್ತು ಮಹಿಳೆಯವರಿಗೆ ಸ್ವರಕ್ಷಣೆಯ ಬಗ್ಗೆ ಮಾಹಿತಿ ನೀಡುವುದು  ಹಗಲು ಹೊತ್ತಿನಲ್ಲಿ ಶಾಲಾ ಕಾಲೇಜುಗಳ ಹತ್ತಿರ ರೌಂಡ್ಸ್‌ ಕರ್ತವ್ಯ ನಿರ್ವಹಿಸಿ ಬಾಲಕಿಯರಿಗೆ ರಕ್ಷಣೆ ನೀಡುವುದು  ಸಾಯಂಕಾಲದ ವೇಳೆ ವಿಧ್ಯಾರ್ಥಿಗಳು ತಂಗುವ ಪಿ ಜಿಗಳು ಹಾಸ್ಟೇಲ್‌ಗಳ ಹತ್ತಿರ ಗಸ್ತು ಕರ್ತವ್ಯ ಮಾಡುವುದು.
ಕೋಟ್ಪಾ ಕಾಯ್ದೆಯನ್ವಯ ಕೇಸುಗಳನ್ನು ದಾಖಲಿಸುವುದು , ಬಸ್‌ಸ್ಟ್ಯಾಂಡ್‌ಗಳು, ರೈಲ್ವೇ ನಿಲ್ದಾಣಗಳು, ಪಾರ್ಕ್‌, ದೇವಸ್ಥಾನ, ಮಾರುಕಟ್ಟೆ ಪ್ರದೇಶಗಳು ಹಾಗೂ ಪ್ರವಾಸಿ ತಾಣಗಳ ಹತ್ತಿರ ಗಸ್ತು ತಿರುಗುವುದು ಕಿಡಿಗೇಡಿಗಳು ಮತ್ತು ಹೆಣ್ಣುಮಕ್ಕಳನ್ನು ಚುಡಾಯಿಸುವವರ ಮೇಲೆ ಕಣ್ಣಿಟ್ಟು ಅಂತವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವುದು.
ಜಾತ್ರೆ, ಉತ್ಸವಗಳು, ಪ್ರತಿಭಟನೆ ಮತ್ತು ಮೆರವಣಿಗೆಗಳ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

5 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago