ಎಲಿಮಲೆ : ಎಲಿಮಲೆ ಜೀರ್ಮುಕ್ಕಿ ಮುಹ್ಯದ್ದೀನ್ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತರ್ಬಿಯತ್ತುಲ್ ಇಸ್ಲಾಂ ಎಸೋಸಿಯೇಶನ್ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಮದ್ರಸಾ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರಾದ ಹಸನ್ ಹರ್ಲಡ್ಕರವರ ಅಧ್ಯಕ್ಷತೆಯಲ್ಲಿ ಜರಗಿತು. ಸ್ಥಳೀಯ ಇಮಾಮರಾದ ಸೂಫಿ ಮುಸ್ಲಿಯಾರ್ ರವರು ಪ್ರಾರ್ಥನೆಗೆ ನೇತೃತ್ವ ಉದ್ಘಾಟಿಸಿದರು. ವರದಿ ಹಾಗೂ ಲೆಕ್ಕಪತ್ರ ಮಂಡಿಸಿ ನೂತನ ಕಾರ್ಯಕಾರಿ ಸಮಿತಿಯನ್ನು ಆರಿಸಲಾಯಿತು.
ಗೌರವಾಧ್ಯಕ್ಷರಾಗಿ ಅಬ್ದುಲ್ಲ ಜಿ. ಎ. ಕೆ, ಅಧ್ಯಕ್ಷರಾಗಿ ಫೈಝಲ್ ಜೀರ್ಮುಕ್ಕಿ, ಉಪಾಧ್ಯಕ್ಷರಾಗಿ ಸೂಫಿ ಮುಸ್ಲಿಯಾರ್, ಪ್ರ. ಕಾರ್ಯದರ್ಶಿಯಾಗಿ ಜುನೈದ್ ಸಖಾಫಿ ಜೀರ್ಮುಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಜಿ. ಎಂ, ಕೋಶಾಧಿಕಾರಿಯಾಗಿ ಹಸನ್ ಹರ್ಲಡ್ಕ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಜಿ. ಎಸ್ ಅಬ್ದುಲ್ಲ, ಸಿದ್ದೀಖ್ ಜಿ, ಹನೀಫ್ ಜಿ, ಬಾತಿಷಾ ವೈ ಹಾಗೂ ಲತೀಫ್ ಕ್ವಾಲಿಟಿ ಆಯ್ಕೆಯಾದರು.
ಜಮಾಅತ್ತಿನ ಹಿರಿಯ ನಾಯಕರಾದ ಅಬೂಬಕರ್ ಪಿ. ಎಚ್, ಮುಹಮ್ಮದ್ ಕುಂಞಿ ಹರ್ಲಡ್ಕ, ಮಸೀದಿಯ ಕೋಶಾಧಿಕಾರಿ ಯೂಸುಫ್ ಪಿ. ಎಚ್, ಸಮಿತಿಯ ಸ್ಥಾಪಕ ನಾಯಕರಾದ ಎಂ. ಕೆ ಜೀರ್ಮುಕ್ಕಿ, ಅಶ್ರಫ್ ಜಿ ಮುಂತಾದವರು ಮುಖ್ಯಾತಿಥಿಗಳಾಗಿ ಭಾಗವಹಿಸಿದ್ದರು. ಲತೀಫ್ ಕ್ವಾಲಿಟಿ ಸ್ವಾಗತಿಸಿ, ನೂತನ ಪ್ರ. ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ವಂದಿಸಿದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…