Advertisement
ಅನುಕ್ರಮ

ಜೀವನದಿ ಬರಿದಾದ ಮೇಲೆ ನರೇಂದ್ರ ಮೋದಿಜೀ ಏನು ಮಾಡಲು ಸಾಧ್ಯ ?

Share

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಜೀವನದಿ ಬರಿದಾಗುತ್ತಿದೆ, ಬರಿದಾಗಿದೆ.

ಎರಡು ವರ್ಷಗಳಿಂದ ಈ ಎಚ್ಚರಿಕೆಯನ್ನು ಪರಿಸರ ಪ್ರೇಮಿಗಳಿಂದ ತೊಡಗಿ ಎಲ್ಲರೂ ಹೇಳುತ್ತಲೇ ಬಂದಿದ್ದರು. ಈ ಬಾರಿ ವಿಪರೀತ ಬಿಸಿಲಿನ ಕಾರಣದಿಂದ ಬತ್ತಿದೆ. ಮಂಗಳೂರು ನಗರಕ್ಕೆ ರೇಶನ್ ಮಾದರಿ ನೀರು ಸರಬರಾಜು ನಡೆಯುತ್ತಿದೆ. ಪ್ರತೀ ವರ್ಷ ಹೀಗೆಯೇ ಇರುತ್ತದೆ ಅಂತ ಅಲ್ಲ,  ಆದರೆ ,ಇನ್ನು ಹೆಚ್ಚಿನ ವರ್ಷ ಹೀಗೆ ಇರುವುದು ನಿಶ್ಚಿತ.

ನಿನ್ನೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭಕ್ತಾದಿಗಳಿಗೆ ಮನವಿ ಮಾಡಿ,  “ನೇತ್ರಾವತಿ ನದಿಯಲ್ಲಿ  ನೀರಿನ ಹರಿವು ತೀರಾ ಕಡಿಮೆಯಾಗಿದೆ, ಹೀಗಾಗಿ ಭಕ್ತಾದಿಗಳಲ್ಲಿ  ಪ್ರವಾಸ ಮುಂದೂಡಿ” ಎಂದು ಪ್ರಕಟಣೆ ನೀಡಿದ್ದರು. ಕ್ಷಣ ಮಾತ್ರದಲ್ಲಿ ಜಿಲ್ಲೆಯ, ರಾಜ್ಯದ ಎಲ್ಲಾ ಕಡೆಗಳಿಗೂ ಈ ಸುದ್ದಿ ತಲಪಿತು. ನೀರಿನ ಕೊರತೆ ಧರ್ಮಸ್ಥಳ, ನೇತ್ರಾವತಿಯಲ್ಲೂ ಇರುವುದು  ತಿಳಿಯಿತು. ಇದೊಂದೇ ಅಲ್ಲ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ , ಪಯಸ್ವಿನಿ ನದಿಯೂ ಬತ್ತಿದೆ. ಪಯಸ್ವಿನಿ ನದಿಯ ಪರಿಸ್ಥಿತಿ ಇನ್ನೂ ಭೀಕರ ಇದೆ. ಕಳೆದ ಬಾರಿ ಕೊಡಗಿನ ದುರಂತದ ನಂತರ ಇಡೀ ಮಣ್ಣು ರಾಶಿ ರಾಶಿ ಬಂದು ಹೂಳಾಗಿ ನದಿಯಲ್ಲಿ  ತುಂಬಿದೆ. ಈಗ ನೀರಿನ ಹರಿವು ಬತ್ತಿದೆ. ಸಮಸ್ಯೆ ಆರಂಭವಾಗಿದೆ. ಕುಮಾರಧಾರಾ ನದಿಯಲ್ಲೂ ನೀರಿನ ಹರಿವು ಕಡಿಮೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳು ಬತ್ತುತ್ತಿರುವ ಬಗ್ಗೆ ಈಗಲ್ಲ, ಎರಡು ವರ್ಷದ ಹಿಂದಿನಿಂದಲೇ ಎಚ್ಚರಿಸಲಾಗಿತ್ತು. ಪರಿಸರ ಪ್ರೇಮಿಗಳು, ಪರಿಸರ ವಾದಿಗಳು, ಪರಿಸರದ ಬಗ್ಗೆ ಅಲ್ಪ ಸ್ವಲ್ಪ ತಿಳಿದ ಎಲ್ಲರೂ ಹೇಳಿದ್ದರು. ನೀರಿನ ಸಮಸ್ಯೆ ದಕ್ಷಿಣ ಕನ್ನಡದಲ್ಲಿ ಕಾಣಲಿದೆ, ಇದಕ್ಕೆ ಪ್ರಮುಖ ಕಾರಣ ನದಿ ತಿರುಗಿಸುವ ಯೋಜನೆ, ಅರಣ್ಯ ನಾಶ ಸೇರಿದಂತೆ ಹತ್ತು ಹಲವು ಕಾರಣವನ್ನೂ ಕೊಟ್ಟಿದ್ದರು. ಆದರೆ ಆಗ ಯಾರೊಬ್ಬರೂ ಮಾತನಾಡಿಲ್ಲ. ಸುಮಾರು 5 ವರ್ಷದ ಹಿಂದೆ ನೇತ್ರಾವತಿ ನದಿ ತಿರುವು ಯೋಜನೆ, ಪರಿಸರ ರಕ್ಷಣೆಯ ಬಗ್ಗೆ ಪುತ್ತೂರಿನ ಕಾಲೇಜಿನ ವಿದ್ಯಾರ್ಥಿಗಳು ಇಡೀ ಜಿಲ್ಲೆಯಲ್ಲಿ ಉಪನ್ಯಾಸಕರೊಬ್ಬರ ನೇತೃತ್ವದಲ್ಲಿ ಅಭಿಯಾನ ಮಾಡಿದ್ದರು. ಈ ಅಭಿಯಾನದ ವಿರುದ್ಧ ಕೆಲ ರಾಜಕಾರಣಿಗಳು ಕತ್ತಿ ಮಸೆದಿದ್ದರು. ಅದಾದ ಬಳಿಕ ನೇತ್ರಾವತಿ ನದಿ ತಿರುವು ಬದಲಾಗಿ ಬೇರೊಂದು ಹೆಸರಿನಲ್ಲಿ ಯೋಜನೆ ಬಂದಿದೆ, ಜಾರಿಯಾಗಿದೆ ಕೋಟಿ ಕೋಟಿ ಖರ್ಚಾಗುತ್ತಿದೆ. ಅನೇಕ ಮರಗಳು ಧರೆಗೆ ಉರುಳಿದೆ. ಮಳೆ ನಾಡಲ್ಲೂ ಮಳೆ ಕಡಿಮೆಯಾಗುತ್ತಿದೆ. ನೀರೆಲ್ಲಾ ಬತ್ತುತ್ತಿದೆ….!.  ಈಗ ಹವಾಮಾನ ವೈಪರೀತ್ಯದ ಕಾರಣದಿಂದ ಎಲ್ಲಿ ಮಳೆ ಬೀಳಬೇಕೋ ಅಲ್ಲಿ ಬೀಳದೆ, ನಗರದಲ್ಲೋ, ಎಲ್ಲೆಲ್ಲೋ ಮಳೆಯಾಗುತ್ತದೆ.

ಈಗ ಟ್ವಿಟ್ಟರ್ ಅಭಿಯಾನ ಶುರುವಾಗಿದೆ. ನೀರಿನ ಸಮಸ್ಯೆ ಇರುವ ಮಂದಿ ಮಾತ್ರವಲ್ಲ ಕಾಳಜಿ ಇರುವ  ಮಂದಿಯೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಮುಖ್ಯಮಂತ್ರಿಗಳಿಗೆ ಟ್ವೀಟ್ ಮಾಡಲು ಮುಂದಾಗಿದ್ದಾರೆ. ಈ ಜಾಗೃತಿ ಕಾರ್ಯದ ಬಗ್ಗೆ ಎರಡು ಮಾತಿಲ್ಲ. ಇಂದು ಅಗತ್ಯವೇ ಆಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರಾದರೂ ಮಳೆ ಬರಿಸಲು, ದಕ್ಷಿಣ ಕನ್ನಡ ಸಹಿತ ಯಾವುದೇ ಜೀವನದಿಯನ್ನು  ಹೇಗೆ ಮರುಸೃಷ್ಠಿ ಮಾಡಲು ಸಾಧ್ಯ ?. ಇಷ್ಟೂ ವರ್ಷ ಜಿಲ್ಲೆಯಲ್ಲಿದ್ದ ಜನಪ್ರತಿನಿಧಿಗಳು, ಸಂಸದರು, ಶಾಸಕರು ಸಚಿವರುಗಳು ಮೌನವಾಗಿದ್ದು ಈಗ ಪ್ರಧಾನಿ ನರೇಂದ್ರ ಮೋದಿ ಅವರು , ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಏನು ಮಾಡಲು ಸಾಧ್ಯ.

ಆಗಬೇಕಿರುವುದು ಪ್ರಧಾನಿ, ಮುಖ್ಯಮಂತ್ರಿಗಳಿಂದ ಅಲ್ಲ ಸ್ಥಳೀಯ ಜನನಾಯಕರಿಂದ ದಕ್ಷಿಣ ಕನ್ನಡ  ಸೇರಿದಂತೆ ಆಯಾ ಜಿಲ್ಲೆಯ ಜನರಿಂದ. ಆಗ ಮಳೆ ಬರಬಹುದು, ಬೆಳೆಯೂ ಬೆಳೆಯಬಹುದು. ನೀರು ಹರಿಯಬಹುದು. ಈ ಪ್ರಯತ್ನ ಆಗಲಿ. ಭವಿಷ್ಯದ ದೃಷ್ಠಿಯಿಂದ  ಇದಕ್ಕೇನು ಮಾಡಬಹುದು ಎಂಬ ಚಿಂತನೆ ಶುರುವಾಗಲಿ. ಆ ಹೆಜ್ಜೆ ಇಡೋಣ ಜೊತೆಯಾಗಿ….

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

3 hours ago

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ

ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…

3 hours ago

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…

18 hours ago

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

1 day ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

1 day ago

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

1 day ago