Advertisement
ವೈರಲ್ ಸುದ್ದಿ

ಜೀವರಕ್ಷಕ ಔಷಧಿ ಮನೆಗೆ ತಲುಪಿಸಿದ ಅಟೋ ಚಾಲಕ | ಲಾಕ್ಡೌನ್ ಒತ್ತಡದಲ್ಲಿ ಅಟೋ ಚಾಲಕನ “ಪ್ರಾಮಾಣಿಕ” ಸೇವೆ|

Share

ಮಂಗಳೂರು: ಪ್ರಾಮಾಣಿಕತೆ ಎನ್ನುವುದು  ಮನುಷ್ಯನ ಹುಟ್ಟಿನಲ್ಲೇ ಬರಬೇಕಾದ ಗುಣ. ಈಚೆಗೆ ಪ್ರಾಮಾಣಿಕತೆಯೂ ಸುದ್ದಿಯಾಗುತ್ತದೆ. ಆದರೆ ಇದು ಹಾಗಲ್ಲ, ಲಾಕ್ಡೌನ್ ನಡುವೆ, ಎಲ್ಲಾ ಒತ್ತಡದ ನಡುವೆ ತನ್ನ ಅಟೋದಲ್ಲಿ  ಪ್ರಯಾಣಿಸಿದ ಪ್ರಯಾಣಿಕನ ಜೀವರಕ್ಷಕ ಔಷಧಿ ಮನೆಗೆ ತಲುಪಿಸಿದ ಪ್ರಾಮಾಣಿಕ ಸೇವೆ. ಇದು ನಡೆದದ್ದು ಮೂಡಬಿದರೆಯಲ್ಲಿ.

ವ್ಯಕ್ತಿಯೋರ್ವರು ತಮ್ಮ ಔಷಧಿ ಹಾಗೂ ವೈದ್ಯಕೀಯ ದಾಖಲೆಗಳನ್ನು ಮನೆಗೆ ಹೋಗುವ ತುರಾತುರಿಯಲ್ಲಿ ರಿಕ್ಷಾದಲ್ಲೇ ಬಿಟ್ಟು ಹೋಗಿದ್ದು, ಇದನ್ನು ನಂತರ ಗಮನಿಸಿದ ಚಾಲಕ ವೈದ್ಯಕೀಯ ದಾಖಲೆಗಳನ್ನು ಹಿಂತಿರುಗಿಸಿದ್ದಾರೆ. ಇತ್ತೀಚೆಗೆ ಆಂಜಿಯೋಪ್ಲಾಸ್ಟಿ ಆದ ವ್ಯಕ್ತಿ ತಮ್ಮ ಔಷಧಿ ಹಾಗೂ ವೈದ್ಯಕೀಯ ದಾಖಲೆಗಳನ್ನು ರಿಕ್ಷಾದಲ್ಲಿ ಮರೆತು ಹೋಗಿದ್ದರು. ಈ ಔಷಧಿಗಳು ಜೀವರಕ್ಷಕ ಔಷಧಿಯಾಗಿದ್ದು  ಲಾಕ್ಡೌನ್ ನಡುವೆ  ಪರಿಶ್ರಮದಿಂದ ರೋಗಿಯು ಖರೀದಿ ಮಾಡಿ ಅವಸರದಲ್ಲಿ ಮನೆಗೆ ಹೋಗುವ ಸಂದರ್ಭ ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ರಿಕ್ಷಾ ಚಾಲಕ ಯೂಸುಫ್ ಕೂಡಲೇ ಅದರಲ್ಲಿ ನಮೂದಿಸಿದ ವೈದ್ಯರ ಮೊಬೈಲಿಗೆ(ಡಾ.ಪದ್ಮನಾಭ ಕಾಮತ್) ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ವಿಷಯವನ್ನು ತಿಳಿದ ಕೂಡಲೇ  ಆಸ್ಪತ್ರೆಯ ಹೌಸ್ ಕೀಪಿಂಗ್ ಸಹಾಯಕಿ ಭಾರತಿ ಅವರು ತಕ್ಷಣ ರೋಗಿಯ ಮೊಬೈಲ್ ನಂಬರನ್ನು ದಾಖಲೆಯಿಂದ ಪರಿಶೀಲಿಸಿ ಎರಡೂ ಪಂಗಡದವರಿಗೆ ತಿಳಿಸಿರುತ್ತಾರೆ .  ಅಟೋ ಚಾಲಕ ಯೂಸುಫ್ ಅವರು ರೋಗಿಯ ಮೊಬೈಲ್ ನಂಬರ್ ಪಡೆದುಕೊಂಡು ಅವರ ವಿಳಾಸಕ್ಕೆ ವೈದ್ಯಕೀಯ ದಾಖಲೆಗಳನ್ನು ಹಿಂತಿರುಗಿಸಿ ಪ್ರಾಮಾಣಿಕ ಸೇವೆ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

16 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

17 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

19 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

19 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago