Advertisement
ವೈರಲ್ ಸುದ್ದಿ

ಜೀವರಕ್ಷಕ ಔಷಧಿ ಮನೆಗೆ ತಲುಪಿಸಿದ ಅಟೋ ಚಾಲಕ | ಲಾಕ್ಡೌನ್ ಒತ್ತಡದಲ್ಲಿ ಅಟೋ ಚಾಲಕನ “ಪ್ರಾಮಾಣಿಕ” ಸೇವೆ|

Share

ಮಂಗಳೂರು: ಪ್ರಾಮಾಣಿಕತೆ ಎನ್ನುವುದು  ಮನುಷ್ಯನ ಹುಟ್ಟಿನಲ್ಲೇ ಬರಬೇಕಾದ ಗುಣ. ಈಚೆಗೆ ಪ್ರಾಮಾಣಿಕತೆಯೂ ಸುದ್ದಿಯಾಗುತ್ತದೆ. ಆದರೆ ಇದು ಹಾಗಲ್ಲ, ಲಾಕ್ಡೌನ್ ನಡುವೆ, ಎಲ್ಲಾ ಒತ್ತಡದ ನಡುವೆ ತನ್ನ ಅಟೋದಲ್ಲಿ  ಪ್ರಯಾಣಿಸಿದ ಪ್ರಯಾಣಿಕನ ಜೀವರಕ್ಷಕ ಔಷಧಿ ಮನೆಗೆ ತಲುಪಿಸಿದ ಪ್ರಾಮಾಣಿಕ ಸೇವೆ. ಇದು ನಡೆದದ್ದು ಮೂಡಬಿದರೆಯಲ್ಲಿ.

Advertisement
Advertisement
Advertisement
Advertisement

Advertisement

ವ್ಯಕ್ತಿಯೋರ್ವರು ತಮ್ಮ ಔಷಧಿ ಹಾಗೂ ವೈದ್ಯಕೀಯ ದಾಖಲೆಗಳನ್ನು ಮನೆಗೆ ಹೋಗುವ ತುರಾತುರಿಯಲ್ಲಿ ರಿಕ್ಷಾದಲ್ಲೇ ಬಿಟ್ಟು ಹೋಗಿದ್ದು, ಇದನ್ನು ನಂತರ ಗಮನಿಸಿದ ಚಾಲಕ ವೈದ್ಯಕೀಯ ದಾಖಲೆಗಳನ್ನು ಹಿಂತಿರುಗಿಸಿದ್ದಾರೆ. ಇತ್ತೀಚೆಗೆ ಆಂಜಿಯೋಪ್ಲಾಸ್ಟಿ ಆದ ವ್ಯಕ್ತಿ ತಮ್ಮ ಔಷಧಿ ಹಾಗೂ ವೈದ್ಯಕೀಯ ದಾಖಲೆಗಳನ್ನು ರಿಕ್ಷಾದಲ್ಲಿ ಮರೆತು ಹೋಗಿದ್ದರು. ಈ ಔಷಧಿಗಳು ಜೀವರಕ್ಷಕ ಔಷಧಿಯಾಗಿದ್ದು  ಲಾಕ್ಡೌನ್ ನಡುವೆ  ಪರಿಶ್ರಮದಿಂದ ರೋಗಿಯು ಖರೀದಿ ಮಾಡಿ ಅವಸರದಲ್ಲಿ ಮನೆಗೆ ಹೋಗುವ ಸಂದರ್ಭ ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ರಿಕ್ಷಾ ಚಾಲಕ ಯೂಸುಫ್ ಕೂಡಲೇ ಅದರಲ್ಲಿ ನಮೂದಿಸಿದ ವೈದ್ಯರ ಮೊಬೈಲಿಗೆ(ಡಾ.ಪದ್ಮನಾಭ ಕಾಮತ್) ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ವಿಷಯವನ್ನು ತಿಳಿದ ಕೂಡಲೇ  ಆಸ್ಪತ್ರೆಯ ಹೌಸ್ ಕೀಪಿಂಗ್ ಸಹಾಯಕಿ ಭಾರತಿ ಅವರು ತಕ್ಷಣ ರೋಗಿಯ ಮೊಬೈಲ್ ನಂಬರನ್ನು ದಾಖಲೆಯಿಂದ ಪರಿಶೀಲಿಸಿ ಎರಡೂ ಪಂಗಡದವರಿಗೆ ತಿಳಿಸಿರುತ್ತಾರೆ .  ಅಟೋ ಚಾಲಕ ಯೂಸುಫ್ ಅವರು ರೋಗಿಯ ಮೊಬೈಲ್ ನಂಬರ್ ಪಡೆದುಕೊಂಡು ಅವರ ವಿಳಾಸಕ್ಕೆ ವೈದ್ಯಕೀಯ ದಾಖಲೆಗಳನ್ನು ಹಿಂತಿರುಗಿಸಿ ಪ್ರಾಮಾಣಿಕ ಸೇವೆ ಮಾಡಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

4 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

4 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

5 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

5 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

19 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

19 hours ago