Advertisement
ವೈರಲ್ ಸುದ್ದಿ

ಜೀವರಕ್ಷಕ ಔಷಧಿ ಮನೆಗೆ ತಲುಪಿಸಿದ ಅಟೋ ಚಾಲಕ | ಲಾಕ್ಡೌನ್ ಒತ್ತಡದಲ್ಲಿ ಅಟೋ ಚಾಲಕನ “ಪ್ರಾಮಾಣಿಕ” ಸೇವೆ|

Share

ಮಂಗಳೂರು: ಪ್ರಾಮಾಣಿಕತೆ ಎನ್ನುವುದು  ಮನುಷ್ಯನ ಹುಟ್ಟಿನಲ್ಲೇ ಬರಬೇಕಾದ ಗುಣ. ಈಚೆಗೆ ಪ್ರಾಮಾಣಿಕತೆಯೂ ಸುದ್ದಿಯಾಗುತ್ತದೆ. ಆದರೆ ಇದು ಹಾಗಲ್ಲ, ಲಾಕ್ಡೌನ್ ನಡುವೆ, ಎಲ್ಲಾ ಒತ್ತಡದ ನಡುವೆ ತನ್ನ ಅಟೋದಲ್ಲಿ  ಪ್ರಯಾಣಿಸಿದ ಪ್ರಯಾಣಿಕನ ಜೀವರಕ್ಷಕ ಔಷಧಿ ಮನೆಗೆ ತಲುಪಿಸಿದ ಪ್ರಾಮಾಣಿಕ ಸೇವೆ. ಇದು ನಡೆದದ್ದು ಮೂಡಬಿದರೆಯಲ್ಲಿ.

ವ್ಯಕ್ತಿಯೋರ್ವರು ತಮ್ಮ ಔಷಧಿ ಹಾಗೂ ವೈದ್ಯಕೀಯ ದಾಖಲೆಗಳನ್ನು ಮನೆಗೆ ಹೋಗುವ ತುರಾತುರಿಯಲ್ಲಿ ರಿಕ್ಷಾದಲ್ಲೇ ಬಿಟ್ಟು ಹೋಗಿದ್ದು, ಇದನ್ನು ನಂತರ ಗಮನಿಸಿದ ಚಾಲಕ ವೈದ್ಯಕೀಯ ದಾಖಲೆಗಳನ್ನು ಹಿಂತಿರುಗಿಸಿದ್ದಾರೆ. ಇತ್ತೀಚೆಗೆ ಆಂಜಿಯೋಪ್ಲಾಸ್ಟಿ ಆದ ವ್ಯಕ್ತಿ ತಮ್ಮ ಔಷಧಿ ಹಾಗೂ ವೈದ್ಯಕೀಯ ದಾಖಲೆಗಳನ್ನು ರಿಕ್ಷಾದಲ್ಲಿ ಮರೆತು ಹೋಗಿದ್ದರು. ಈ ಔಷಧಿಗಳು ಜೀವರಕ್ಷಕ ಔಷಧಿಯಾಗಿದ್ದು  ಲಾಕ್ಡೌನ್ ನಡುವೆ  ಪರಿಶ್ರಮದಿಂದ ರೋಗಿಯು ಖರೀದಿ ಮಾಡಿ ಅವಸರದಲ್ಲಿ ಮನೆಗೆ ಹೋಗುವ ಸಂದರ್ಭ ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ರಿಕ್ಷಾ ಚಾಲಕ ಯೂಸುಫ್ ಕೂಡಲೇ ಅದರಲ್ಲಿ ನಮೂದಿಸಿದ ವೈದ್ಯರ ಮೊಬೈಲಿಗೆ(ಡಾ.ಪದ್ಮನಾಭ ಕಾಮತ್) ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ವಿಷಯವನ್ನು ತಿಳಿದ ಕೂಡಲೇ  ಆಸ್ಪತ್ರೆಯ ಹೌಸ್ ಕೀಪಿಂಗ್ ಸಹಾಯಕಿ ಭಾರತಿ ಅವರು ತಕ್ಷಣ ರೋಗಿಯ ಮೊಬೈಲ್ ನಂಬರನ್ನು ದಾಖಲೆಯಿಂದ ಪರಿಶೀಲಿಸಿ ಎರಡೂ ಪಂಗಡದವರಿಗೆ ತಿಳಿಸಿರುತ್ತಾರೆ .  ಅಟೋ ಚಾಲಕ ಯೂಸುಫ್ ಅವರು ರೋಗಿಯ ಮೊಬೈಲ್ ನಂಬರ್ ಪಡೆದುಕೊಂಡು ಅವರ ವಿಳಾಸಕ್ಕೆ ವೈದ್ಯಕೀಯ ದಾಖಲೆಗಳನ್ನು ಹಿಂತಿರುಗಿಸಿ ಪ್ರಾಮಾಣಿಕ ಸೇವೆ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago