Advertisement
ವೈರಲ್ ಸುದ್ದಿ

ಜೀವರಕ್ಷಕ ಔಷಧಿ ಮನೆಗೆ ತಲುಪಿಸಿದ ಅಟೋ ಚಾಲಕ | ಲಾಕ್ಡೌನ್ ಒತ್ತಡದಲ್ಲಿ ಅಟೋ ಚಾಲಕನ “ಪ್ರಾಮಾಣಿಕ” ಸೇವೆ|

Share

ಮಂಗಳೂರು: ಪ್ರಾಮಾಣಿಕತೆ ಎನ್ನುವುದು  ಮನುಷ್ಯನ ಹುಟ್ಟಿನಲ್ಲೇ ಬರಬೇಕಾದ ಗುಣ. ಈಚೆಗೆ ಪ್ರಾಮಾಣಿಕತೆಯೂ ಸುದ್ದಿಯಾಗುತ್ತದೆ. ಆದರೆ ಇದು ಹಾಗಲ್ಲ, ಲಾಕ್ಡೌನ್ ನಡುವೆ, ಎಲ್ಲಾ ಒತ್ತಡದ ನಡುವೆ ತನ್ನ ಅಟೋದಲ್ಲಿ  ಪ್ರಯಾಣಿಸಿದ ಪ್ರಯಾಣಿಕನ ಜೀವರಕ್ಷಕ ಔಷಧಿ ಮನೆಗೆ ತಲುಪಿಸಿದ ಪ್ರಾಮಾಣಿಕ ಸೇವೆ. ಇದು ನಡೆದದ್ದು ಮೂಡಬಿದರೆಯಲ್ಲಿ.

ವ್ಯಕ್ತಿಯೋರ್ವರು ತಮ್ಮ ಔಷಧಿ ಹಾಗೂ ವೈದ್ಯಕೀಯ ದಾಖಲೆಗಳನ್ನು ಮನೆಗೆ ಹೋಗುವ ತುರಾತುರಿಯಲ್ಲಿ ರಿಕ್ಷಾದಲ್ಲೇ ಬಿಟ್ಟು ಹೋಗಿದ್ದು, ಇದನ್ನು ನಂತರ ಗಮನಿಸಿದ ಚಾಲಕ ವೈದ್ಯಕೀಯ ದಾಖಲೆಗಳನ್ನು ಹಿಂತಿರುಗಿಸಿದ್ದಾರೆ. ಇತ್ತೀಚೆಗೆ ಆಂಜಿಯೋಪ್ಲಾಸ್ಟಿ ಆದ ವ್ಯಕ್ತಿ ತಮ್ಮ ಔಷಧಿ ಹಾಗೂ ವೈದ್ಯಕೀಯ ದಾಖಲೆಗಳನ್ನು ರಿಕ್ಷಾದಲ್ಲಿ ಮರೆತು ಹೋಗಿದ್ದರು. ಈ ಔಷಧಿಗಳು ಜೀವರಕ್ಷಕ ಔಷಧಿಯಾಗಿದ್ದು  ಲಾಕ್ಡೌನ್ ನಡುವೆ  ಪರಿಶ್ರಮದಿಂದ ರೋಗಿಯು ಖರೀದಿ ಮಾಡಿ ಅವಸರದಲ್ಲಿ ಮನೆಗೆ ಹೋಗುವ ಸಂದರ್ಭ ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ರಿಕ್ಷಾ ಚಾಲಕ ಯೂಸುಫ್ ಕೂಡಲೇ ಅದರಲ್ಲಿ ನಮೂದಿಸಿದ ವೈದ್ಯರ ಮೊಬೈಲಿಗೆ(ಡಾ.ಪದ್ಮನಾಭ ಕಾಮತ್) ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ವಿಷಯವನ್ನು ತಿಳಿದ ಕೂಡಲೇ  ಆಸ್ಪತ್ರೆಯ ಹೌಸ್ ಕೀಪಿಂಗ್ ಸಹಾಯಕಿ ಭಾರತಿ ಅವರು ತಕ್ಷಣ ರೋಗಿಯ ಮೊಬೈಲ್ ನಂಬರನ್ನು ದಾಖಲೆಯಿಂದ ಪರಿಶೀಲಿಸಿ ಎರಡೂ ಪಂಗಡದವರಿಗೆ ತಿಳಿಸಿರುತ್ತಾರೆ .  ಅಟೋ ಚಾಲಕ ಯೂಸುಫ್ ಅವರು ರೋಗಿಯ ಮೊಬೈಲ್ ನಂಬರ್ ಪಡೆದುಕೊಂಡು ಅವರ ವಿಳಾಸಕ್ಕೆ ವೈದ್ಯಕೀಯ ದಾಖಲೆಗಳನ್ನು ಹಿಂತಿರುಗಿಸಿ ಪ್ರಾಮಾಣಿಕ ಸೇವೆ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

3 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

10 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

21 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

21 hours ago