Advertisement

ಜುಲೈ 15 ರ ಮೊದಲು ಸುಬ್ರಹ್ಮಣ್ಯದ ಒಳಚರಂಡಿ ಘಟಕ ಸುಸ್ಥಿತಿಗೆ

Share

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದ  ಒಳಚರಂಡಿ ನೀರು ಶುದ್ದೀಕರಣ ಘಟಕವು ಜುಲೈ15 ರ ಒಳಗಾಗಿ ಸುಸ್ಥಿತಿಗೆ ತರುವ ಭರವಸೆಯನ್ನು  ಒಳಚರಂಡಿ ಮಂಡಳಿ ಅಧಿಕಾರಿಗಳು  ನೀಡಿದ್ದಾರೆ.

ಶನಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಕ್ಕೆ ಶ್ರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ಒಳಚರಂಡಿ ಮಂಡಳಿ ಅಧಿಕಾರಿಗಳ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು  ಕುಕ್ಕೆ ಶ್ರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ  ವಹಿಸಿದ್ದರು. ಕುಕ್ಕೆಯಲ್ಲಿರುವ ಜಲಮಂಡಳಿ ಹಾಗೂ ಒಳಚರಂಡಿ ಯೋಜನೆಯ ನೀರು ಶುದ್ದೀಕರಣ ಘಟಕದಲ್ಲಿ ಜುಲೈ 15 ರೊಳಗೆ ಹೆಚ್ಚುವರಿ 10 ಶುದ್ದೀಕರಣ ಪ್ಯಾನು ಅಳವಡಿಸಲು ಇದೇ ಸಂದರ್ಭ ನಿರ್ಧರಿಸಲಾಯಿತು.

ಒಳಚರಂಡಿ ನೀರು ಶುಧ್ದೀಕರಣ ಪ್ರಾಜೆಕ್ಟ್ ಅನುಷ್ಠಾನಗೊಳಿಸುವ ವೇಳೆ ಆರಂಭದ ಸೂಚನೆಯಂತೆ ಅಧಿಕಾರಿಗಳು ನಡೆದುಕೊಂಡಿಲ್ಲ. ಷರತ್ತು ಹಾಗೂ ನಿಯಮಾವಳಿಯಂತೆ ಅಳವಡಿಕೆ ಆಗಿಲ್ಲ. ಘಟಕದ ಸಾಮರ್ಥ್ಯ  ಕೂಡ ಕಡಿಮೆಯಿದ್ದು ಇದರಿಂದ ಸಮಸ್ಯೆಯಾಗಿದೆ ಎಂದು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಚರ್ಚೆ ನಡೆದು ಈಗ ಒಳಚರಂಡಿಗೆ ಮೀಸಲಿಟ್ಟ ಅನುದಾನದಲ್ಲೆ ಶುದ್ದೀಕರಣ ಘಟಕನ್ನು ಸಮರ್ಪಗೊಳಿಸಲು ಹೆಚ್ಚುವರಿ ಹತ್ತು ಎರಿಯಟೇರ್ಸ್ ಪ್ಯಾನುಗಳನ್ನು ಘಟಕದಲ್ಲಿ ಅಳವಡಿಸಿಕೊಡುವ ಕುರಿತು ಅಧಿಕಾರಿಗಳು ಒಪ್ಪಿಕೊಂಡರು. ಮುಂದಿನ ಜುಲೈ 15ರ ಒಳಗೆ ಈ ಕಾರ್ಯವನ್ನು ಮಾಡಿಕೊಡುವ ಭರವಸೆಯನ್ನು ಅಧಿಕಾರಿಗಳು ನೀಡಿದರು.

ಸಭೆಯಲ್ಲಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್, ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸಂಶುದ್ದಿನ್, ಸಮಿತಿ ಸದಸ್ಯರಾದ ಮಹೇಶ್ ಕುಮಾರ್ ಕರಿಕಳ,  ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಬಳ್ಳೇರಿ, ರಾಜೀವಿ ಆರ್ ರೈ, ಮಾಧವ .ಡಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ವಿಮಲ ರಂಗಯ್ಯ, ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಶಿವರಾಮ ರೈ, ಗ್ರಾ.ಪಂ ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಸದಸ್ಯ ಪ್ರಶಾಂತ್ ಭಟ್ ಮಾಣಿಲ, ಸಹಾಯಕ ಅಭಿಯಂತರ ಗಣೇಶ್ ನಾಯ್ಕ, ದೇಗುಲದ ಇಂಜಿನೀಯರ್ ಉದಯಕುಮಾರ್, ಅಧಿಕಾರಿಗಳಾದ ಸ್ಟ್ರೀಮ್, ಜೆ,ವಿ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯದ ಕೆಎಸ್‍ಎಸ್ ಕಾಲೇಜಿನ ಬಳಿ ಕಾರ್ಯಾಚರಿಸುತ್ತಿರುವ ನೀರು ಶುದ್ಧೀಕರಣ ಘಟಕದಲ್ಲಿ ನೀರು ಶುದ್ಧಿಕರಣಗೊಳ್ಳದೆ ಕೊಳಚೆ ನೀರು ನೇರ ನದಿ ಸೇರುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ವ್ಯಕ್ತವಾಗಿದ್ದವು. ಇದೀಗ ದೇವಸ್ಥಾನದ ಆಡಳಿತ ಮಂಡಳಿ ಈ ಬಗ್ಗೆ ಕಾರ್ಯಪ್ರವೃತ್ತವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

2 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

19 hours ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

24 hours ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago