ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.
ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.
ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…